ಕೊಡಗಿನಲ್ಲಿ ರಿಯಲ್ ಎಸ್ಟೇಟ್ ಸ್ಥಗಿತಗೊಳಿಸಲು ಆಗ್ರಹ
Team Udayavani, Mar 25, 2024, 9:48 PM IST
ಬೆಂಗಳೂರು: ರಾಜ್ಯದಲ್ಲಿ ನೀರಿನ ಅಭಾವ ಉಂಟಾಗಿರುವ ಜತೆಗೆ ಕೊಡಗಿನಲ್ಲಿ ನಡೆಯುತ್ತಿರುವ ರಿಯಲ್ ಎಸ್ಟೇಟ್ ಕಾಮಗಾರಿಗಳಿಂದಾಗಿ ಪರಿಸರ ಸೇರಿ ಕಾವೇರಿ ನದಿಗೂ ತೊಂದರೆ ಎದುರಾಗಿದೆ ಎಂದು ಕೊಡಗು ಮತ್ತು ಕಾವೇರಿ ಉಳಿಸಿ ಅಭಿಯಾನ ಎಂಬ ಸಂಘಟನೆಯು ಬೇಸರ ವ್ಯಕ್ತಪಡಿಸಿತು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿಯಾನದ ಸಂಯೋಜಕ ಸಿ.ಪಿ.ಮುತ್ತಣ್ಣ, ಮಳೆಯಿಲ್ಲದ ಕಾರಣ ಕಾವೇರಿ ನದಿಯ ಒಳಹರಿವು ಕ್ಷೀಣಿಸುತ್ತಿದೆ. ಈ ಸಂದರ್ಭದಲ್ಲಿ ರಿಯಲ್ ಎಸ್ಟೇಟ್ ಕಾಮಗಾರಿಗಳು ನಡೆದರೆ ಮುಂದಿನ ದಿನಗಳಲ್ಲಿ ತುಂಬಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡರು.
ವಿರಾಜಪೇಟೆ, ಗೋಣಿಕೊಪ್ಪಲು, ಹಾತೂರು, ಸಿದ್ದಾಪುರ ಸಹಿತ ವಿವಿಧ ಪ್ರದೇಶಗಳಲ್ಲಿ ಕಾಫಿ ತೋಟಗಳನ್ನು ಐಷಾರಾಮಿ ಕಾಲನಿಗಳನ್ನಾಗಿ ಮಾರ್ಪಡಿಸಲಾಗುತ್ತಿದೆ. ಭತ್ತದ ಗದ್ದೆಗಳೂ ಬಡಾವಣೆಗಳಾಗಿ ಪರಿವರ್ತನೆಯಾಗುತ್ತಿವೆ. ಇದರಿಂದಾಗಿ ಅರಣ್ಯ ನಾಶದ ಜತೆಗೆ ಸ್ಥಳೀಯರು ಹಾಗೂ ಬೆಂಗಳೂರಿನ ನಗರವಾಸಿಗಳು ಕೂಡ ಕುಡಿಯುವ ನೀರಿಗೆ ಗಂಭಿರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೊಡಗು ಹಾಗೂ ಬೆಂಗಳೂರು ಜನರ ಹಿತದೃಷ್ಟಿಯಿಂದ ರಿಯಲ್ ಎಸ್ಟೇಟ್ ಯೋಜನೆ ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿದರು.
ಕಾವೇರಿ ಜಲಾನಯನ ಪ್ರದೇಶ ಉಳಿಸಲು ಹೋರಾಟ ಅನಿವಾರ್ಯ. ರಿಯಲ್ ಎಸ್ಟೇಟ್ ಯೋಜನೆಗಳ ವಿರುದ್ಧ ಸರಕಾರಕ್ಕೆ ಪತ್ರ ಬರೆಯುತ್ತೇವೆ. ಅಗತ್ಯಬಿದ್ದರೆ ಹೋರಾಟ ನಡೆಸುತ್ತೇವೆ ಎಂದು ಪರಿಸರವಾದಿ ಜೋಸೆಫ್ ಹೂವರ್ ಎಚ್ಚರಿಕೆ ನೀಡಿದರು. ಕಾಫಿ ಬೆಳೆಗಾರ ದೇವಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು