Department of Health: “ತೆರೆದಿಟ್ಟ ತಿಂಡಿ, ಕತ್ತರಿಸಿದ ಹಣ್ಣು ತಿನ್ನಬೇಡಿ’ʼ


Team Udayavani, Mar 3, 2024, 11:24 AM IST

Department of Health: “ತೆರೆದಿಟ್ಟ ತಿಂಡಿ, ಕತ್ತರಿಸಿದ ಹಣ್ಣು ತಿನ್ನಬೇಡಿ’ʼ

ಬೆಂಗಳೂರು:  ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ತಾರಕಕ್ಕೇರುತ್ತಿದ್ದು ವಿವಿಧ ಜಿಲ್ಲೆಯಲ್ಲಿ ಜ್ವರ, ತಲೆ ನೋವು, ಕಣ್ಣಿನ ಸಮಸ್ಯೆ ಸೇರಿ ಇತರ ಅನಾರೋಗ್ಯದಿಂದ ಬಳಲುತ್ತಿರುವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಹೊರಡಿಸಿದೆ.

ಫೆಬ್ರವರಿ ತಿಂಗಳ ಮಧ್ಯ ಭಾಗದಿಂದ ಉಷ್ಣಾಂಶದಲ್ಲಿ ಏರಿಕೆ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಕನಿಷ್ಠ 31ರಿಂದ ಗರಿಷ್ಠ 37ಡಿಗ್ರಿ ಸೆಲ್ಸಿಯಸ್‌ ವರೆಗೆ ಉಷ್ಣಾಂಶ ದಾಖಲಾಗುತ್ತಿದೆ. ಕರಳುಬೇನೆ, ನಿರ್ಜಲೀಕರಣ, ವಾಂತಿ-ಭೇದಿ, ಕಣ್ಣಿನ ಉರಿ, ಚಿಕನ್‌ ಫಾಕ್ಸ್, ಟೈಫಾಯ್ಡ್, ಬಿಸಿಲಿನಿಂದ ತಲೆ ಸುತ್ತು, ಮೈಗ್ರೇನ್‌, ಸನ್‌ ಸ್ಟ್ರೋಕ್‌, ಮೂಗಿನಲ್ಲಿ ರಕ್ತ ಸುರಿಯುವುದು,ಅತಿಯಾದ ಸೂರ್ಯ ಕಿರಣಗಳಿಂದ ಚರ್ಮ ಸಮಸ್ಯೆಗಳು ಜನಸಾಮಾನ್ಯರನ್ನು ಹೆಚ್ಚಾಗಿ ಕಾಡುತ್ತಿವೆ. ಬಿಸಿಲಿನಿಂದ ಉಂಟಾಗುವ ಕಾಯಿಲೆಗಳ ಪ್ರಮಾಣ ತೀವ್ರಗೊಳ್ಳುತ್ತಿರು ವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಹೆಚ್ಚಿನ ನೀರಿನ ಅಂಶದ ಆಹಾರ ಸೇವನೆ, ಕುದಿಸಿ ಆರಿಸಿದ ನೀರು ಸೇವಿಸಬೇಕು, ಬಿಸಿಯಾದ ಊಟ, ಶುದ್ಧವಾದ ಆಹಾರ ಸೇವನೆ, ಮಲ ವಿಸರ್ಜನೆಗೆ ಶೌಚಗೃಹ ಬಳಸಬೇಕು, ತೆರೆದಿಟ್ಟ ತಿಂಡಿ ಹಾಗೂ ಕತ್ತರಿಸಿ ಇಟ್ಟಿರುವ ಹಣ್ಣುಗಳನ್ನು ತಿನ್ನಬಾರದು, ಕೈ ಸ್ವತ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದೆ.

ಬೆವರು ರೂಪದಲ್ಲಿ ದೇಹದ ನೀರು ಹೊರ ಹೋಗು ವುದರಿಂದ ದೇಹದಲ್ಲಿ ತೇವಾಂಶ ಕಡಿಮೆಯಾಗುತ್ತದೆ. ದೇಹ ನಿರ್ಜಲೀಕರಣಗೊಳ್ಳುವುದರಿಂದ ಹಲವು ಸಮಸ್ಯೆ ಸೃಷ್ಟಿಯಾಗುತ್ತದೆ. ಹೀಗಾಗಿ ನೀರಿನ ಜತೆಗೆ, ದೇಹಕ್ಕೆ ಶಕ್ತಿ, ಚೈತನ್ಯ ತುಂಬುವಂತಹ ಹಣ್ಣಿನ ರಸ, ಪಾನೀಯ ಸೇವನೆ ಮೂಲಕ ನೀರಿನ ಅಂಶ ಹೆಚ್ಚಿಸಿ ಕೊಳ್ಳಬೇಕು. ಕಾಟನ್‌ ಉಡುಪು, ಬಿಸಿಲಿಗೆ ಹೋಗುವಾಗ ತಂಪು ಕನ್ನಡಕ, ಛತ್ರಿ ಬಳಕೆ ಸೇರಿ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮ ಪಾಲಿಸುವಂತೆ ಸೂಚಿಸಿದೆ.

ಎಚ್ಚರಿಕೆ ಸಲಹೆಗಳು :

  • ಮಧ್ಯಾಹ್ನ 12ರಿಂದ 3ರ ವರೆಗೆ ಹೊರಹೋಗುವುದನ್ನು ತಪ್ಪಿಸಬೇಕು
  • ಮಧ್ಯಾಹ್ನ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು
  • ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸ ತಪ್ಪಿಸಿ
  • ಮದ್ಯಪಾನ, ಕಾರ್ಬೋನೇಟೆಡ್‌ ಪಾನೀಯಗಳು, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ 
  • ಹೆಚ್ಚು ಪ್ರೊಟೀನ್‌ ಭರಿತ , ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ
  • ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲು ಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ

ಹೆಚ್ಚು ಅಪಾಯವಿರುವ ಗುಂಪು :

ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು

ಗರ್ಭಿಣಿಯರು

ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು

ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು

ಆರೋಗ್ಯ ಸಮಸ್ಯೆಗಳಿರುವವರು,

ರಕ್ತದ ಒತ್ತಡದಿಂದ ಬಳಲುತ್ತಿರುವವರು. 

 

 

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.