ಹಳಿ ತಪ್ಪಿದ ಪ್ಯಾಸೆಂಜರ್ ರೈಲು ಪ್ರಯಾಣಿಕರು ಪಾರು
Team Udayavani, May 18, 2017, 9:55 AM IST
ಚಿತ್ರದುರ್ಗ: ಬೆಂಗಳೂರಿನಿಂದ ಚಿತ್ರದುರ್ಗ ಮಾರ್ಗವಾಗಿ ಹೊಸಪೇಟೆಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಬುಧವಾರ ಬೆಳಗ್ಗೆ ಹಳಿ ತಪ್ಪಿದ್ದು, ರೈಲು ಚಾಲಕ ಸಮಯಪ್ರಜ್ಞೆ ತೋರಿದ್ದರಿಂದ ಪ್ರಯಾಣಿಕರು ಪಾರಾಗಿದ್ದು ಭಾರೀ ಅವಘಡವೊಂದು ತಪ್ಪಿದೆ. ರೈಲು ಚಿತ್ರದುರ್ಗ ನಿಲ್ದಾಣದಿಂದ ಒಂದೂವರೆ ಕಿಮೀ ದೂರ ಸಾಗುವಷ್ಟರಲ್ಲಿ ಈ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 13ರ ಬಳಿ ಪಿಳ್ಳೆಕೆರೆನಹಳ್ಳಿಯ ರೈಲ್ವೆ ಮೇಲ್ಸೇತುವೆಯ ಹಳಿ ತುಂಡಾಗಿದ್ದು
ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಇಂಜಿನ್ ಹಿಂಭಾಗದ ಒಂದು ಬೋಗಿಯ ಎರಡು ಚಕ್ರಗಳು ಹಳಿ ತಪ್ಪಿ ಹಳಿ ಮಧ್ಯದಲ್ಲಿದ್ದ ಕಲ್ಲು, ಸಿಮೆಂಟ್ ಹಲಗೆಗಳ ಮೇಲೆ ಸಾಗಿದವು.
ಇದರಿಂದ ದೊಡ್ಡದಾಗಿ “ಗಡ ಗಡ’ ಶಬ್ದ ಬಂದು ರೈಲು ಅಲುಗಾಡಿದ್ದು ಚಾಲಕನ ಗಮನಕ್ಕೆ ಬಂತು. ತಕ್ಷಣ ಬ್ರೇಕ್ ಹಾಕಿ
ರೈಲು ನಿಲ್ಲಿಸಿದ್ದಾನೆ. ಅಲ್ಲದೆ ನಿಲ್ದಾಣದಿಂದ ಅನತಿ ದೂರದಲ್ಲೇ ಹಳಿ ತಪ್ಪಿದ್ದರಿಂದ ರೈಲು ನಿಧಾನವಾಗಿ ಸಾಗುತ್ತಿದ್ದು ನಿಯಂತ್ರಣಕ್ಕೆ ಬಂದಿದೆ. ಸುದೈವವಶಾತ್ ದೊಡ್ಡ ದುರಂತವೊಂದು ತಪ್ಪಿದೆ. ಮೈಸೂರು, ಹರಿಹರ ಮತ್ತು ಅರಸೀಕೆರೆ ಯಿಂದ ತಜ್ಞ ದುರಸ್ತಿಗಾರರು ಆಗಮಿಸಿದ್ದು, ದುರಸ್ತಿ ಕಾರ್ಯ ಭರದಿಂದಸಾಗಿದೆ. ರೈಲ್ವೆ ಇಲಾಖೆ ಅಧಿಧಿಕಾರಿಗಳು
ರೈಲಿನಲ್ಲಿದ್ದ ಪ್ರಯಾಣಿಕರನ್ನು ಸಾರಿಗೆ ಸಂಸ್ಥೆ ಬಸ್ನಲ್ಲಿ ಬಳ್ಳಾರಿಗೆ ಕಳುಹಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ