ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ದೇವೇಗೌಡ ಕಳವಳ
Team Udayavani, Aug 30, 2019, 3:05 AM IST
ಬೆಂಗಳೂರು: ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಒಂದೆಡೆ ಇದ್ದರೆ ಮತ್ತೂಂದೆಡೆ, ಆರ್ಬಿಐನಿಂದ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದ ಹಣ ಪಡೆಯಲಾಗಿದೆ. ಆರ್ಥಿಕ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಆರ್ಬಿಐನಿಂದ ಹಣ ಪಡೆದಿರುವ ಬಗ್ಗೆ ಈಗಿನ ಗವರ್ನರ್, ಹಿಂದಿನ ಗವರ್ನರ್ಗಳ ಹೇಳಿಕೆ ಗಮನಿಸಿದ್ದೇನೆ ಎಂದು ಹೇಳಿದರು.
ವಿದೇಶಿ ನೇರ ಬಂಡವಾಳ ಎಂದು ಹೇಳುತ್ತಿದ್ದಾರೆ. ಹಲವು ಸರ್ಕಾರಿ ಇಲಾಖೆಗಳ ನೌಕರರಿಗೆ ಸಂಬಳ ಆಗಿಲ್ಲ, ಸರ್ಕಾರಿ ಸ್ವಾಮ್ಯದ ಹಲವು ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಇನ್ನೂ ಹಲವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಗೆ ಕೊಡುವ ಸಾಧ್ಯತೆಯಿದೆ. ಆರ್ಥಿಕ ಸಂಕಷ್ಟದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದರು.
ವಾಜಪೇಯಿ ಕಾಲದಲ್ಲಿ ಅಶೋಕಾ ಹೋಟೆಲ್ ಮಾರಿದಂತೆ ಇನ್ನೂ ಹಲವು ಸಂಸ್ಥೆಗಳನ್ನು ಮಾರಾಟ ಮಾಡಲೂ ಬಹುದು. ಏನೇನು ಮಾಡ್ತಾರೋ ನೋಡೋಣ. ಬೆಂಗಳೂರಿನ ಪೀಣ್ಯದಲ್ಲಿ ಯಾವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂಬುದು ಗೊತ್ತಿದೆ ಎಂದರು. ರಾಜ್ಯದಲ್ಲಿ ಮೊದಲ ಬಾರಿಗೆ ಮೂವರು ಉಪ ಮುಖ್ಯಮಂತ್ರಿ ಮಾಡಲಾಗಿದೆ. ಜಾತಿಗೊಂದು ಅಂತ ಮಾಡಿದರೆ ಇನ್ನೂ ಹಲವು ಜಾತಿಗಳಿವೆ.
ಯಾವ ಆಧಾರದಲ್ಲಿ ಎಂಬುದು ಗೊತ್ತಿಲ್ಲ, ಬಿಜೆಪಿಯಲ್ಲೂ ಹಲವು ಗೊಂದಲಗಳಿವೆ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಆಗುವುದಿಲ್ಲ ಎಂಬ ಕಾಗಿನೆಲೆ ಶ್ರೀ ಹೇಳಿಕೆ ಬಗ್ಗೆ ಕೇಳಿದಾಗ, ಅವರು ದೊಡ್ಡವರು, ನಾನೇನೂ ಮಾತನಾಡಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ