“ಕಾಂಗ್ರೆಸ್-ಬಿಜೆಪಿಗೆ ದೇವೇಗೌಡರ ಭಯ’
Team Udayavani, Oct 4, 2017, 7:25 AM IST
ಬೆಂಗಳೂರು: “ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ದೇವೇಗೌಡರ ಭಯ ಕಾಡುತ್ತಿದೆ’ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮದೇ ಧಾಟಿಯಲ್ಲಿ
ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಲೇವಡಿ ಮಾಡಿದ್ದು ಹೀಗೆ. ನಾಯಕ, ವಿಶ್ವಕರ್ಮ ಸೇರಿ ಸಣ್ಣ ಸಣ್ಣ ಸಮುದಾಯಗಳ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಕಾಳಜಿ ಇರಲಿಲ್ಲ. ನಾನು ಆ ಸಮುದಾಯಗಳ ಸಮಾವೇಶ ಮಾಡಿದ ನಂತರ ಎಚ್ಚೆತ್ತುಕೊಂಡಿವೆ. ಆ ಸಮುದಾಯಗಳು ದೇವೇಗೌಡರ ಪರ ವಾಲಿಬಿಟ್ಟರೆ ಎಂಬ ಭಯ ಕಾಂಗ್ರೆಸ್, ಬಿಜೆಪಿಗಿದೆ. ಆದರೆ ಇದರಿಂದ ದೃತಿಗೆಡಬೇಕಿಲ್ಲ ಎದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಭ್ರಷ್ಟಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ನಮ್ಮ ಸಾಧನೆ ತಿಳಿಸುವ ಕೆಲಸವನ್ನು ಶಾಸಕರಿಂದ ಹಿಡಿದು ಕಾರ್ಯಕರ್ತರವರೆಗೆ ಮಾಡಬೇಕೆಂದು ತಿಳಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಕಣಕ್ಕಿಳಿಯಲಿದ್ದು ನಮ್ಮ ಅಳಿವು- ಉಳಿವಿನ ಪ್ರಶ್ನೆಯಾಗಿದೆ ಎಂದು ಹೇಳಿದರು. ಮುಂದಿನ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಎಲ್ಲ ಕಡೆ
ಸ್ಪರ್ಧಿಸಿ ನಮ್ಮ ಶಕ್ತಿ ಪ್ರದರ್ಶನ ಮಾಡಲೇಬೇಕಾಗಿದೆ ಎಂದು ತಿಳಿಸಿದರು.
ಪಕ್ಷದಲ್ಲಿ 33 ಶಾಸಕರು ಇದ್ದೇವೆ. ಉಳಿದ ಕ್ಷೇತ್ರಗಳಲ್ಲೂ ಗೆಲ್ಲುವ ಪ್ರಯತ್ನ ಮಾಡಬೇಕಿದೆ. ರಾಜ್ಯ ಪ್ರವಾಸಕ್ಕಾಗಿ ತಂಡ ರಚಿಸಲಾಗಿದೆ. ಒಟ್ಟಿಗೆ ಹೋಗುವುದರಿಂದ ಪ್ರವಾಸಕ್ಕೆ ಹೆಚ್ಚು ಬಲ ಬರುತ್ತದೆ ಎಂದು ಹೇಳಿದರು. ಬಸವರಾಜ
ಹೊರಟ್ಟಿ, ಜಿ.ಟಿ.ದೇವೇಗೌಡ, ಎಚ್.ಡಿ. ರೇವಣ್ಣ, ಸಂಸದ ಸಿ.ಎಸ್.ಪುಟ್ಟರಾಜು, ಕುಪೇಂದ್ರರೆಡ್ಡಿ ಉಪಸ್ಥಿತರಿದ್ದರು.
ಎರಡು ಗಂಟೆ ತಂಡ: ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸಂಜೆ ಐದು ಗಂಟೆಗೆ ನಿಗದಿಯಾಗಿತ್ತಾದರೂ ಎರಡು ಗಂಟೆ ತಡವಾಗಿ ಆರಂಭವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ