ಕಿಲ್ಲರ್‌ ಕಟ್ಟಡ: ಸಾವಿನ ಸಂಖ್ಯೆ 15ಕ್ಕೇರಿಕೆ


Team Udayavani, Mar 23, 2019, 12:06 AM IST

1-aaa.jpg

ಧಾರವಾಡ : ಕಿಲ್ಲರ್‌ ಕಟ್ಟಡ ದುರಂತದಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿದ್ದು, ಶುಕ್ರವಾರ ನಾಲ್ಕು ಮಂದಿ ಅವಶೇಷಗಳಿಂದ ಸುರಕ್ಷಿತವಾಗಿ ಹೊರ ಬಂದಿದ್ದಾರೆ. ಈ ನಾಲ್ವರನ್ನು ಸೇರಿ ಒಟ್ಟು 54 ಜನರನ್ನು ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ಅಗ್ನಿಶಾಮಕದಳ ರಕ್ಷಣೆ ಮಾಡಿದ್ದು, ಶನಿವಾರವೂ ಕಾರ್ಯಾಚರಣೆ ಮುಂದುವರಿಯಲಿದೆ.

ಸಾವಿನ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದ ರಕ್ಷಣಾ ಸಿಬ್ಬಂದಿ ನೇರವಾಗಿ ಜೆಸಿಬಿಗಳನ್ನು ಬಳಸಿ ಕಟ್ಟಡದ ಅವಶೇಷಗಳ ತೆರವು ಆರಂಭಿಸಿದ್ದರು. ಬೆಳಗ್ಗೆಯೇ ಮಾಜಿ ಸೈನಿಕ ಸುಬ್ಬಪ್ಪ ದಿಂಡಲಕೊಪ್ಪ (68) ಅವರ ಶವ ಹೊರ ತೆಗೆಯಲಾಯಿತು. ಅವರ ಬೆನ್ನ ಹಿಂದೆಯೇ ಜೀವಂತವಾಗಿ ಹೊರಬಂದ ಸಂಗನಗೌಡ ರಾಮನಗೌಡರ ಕಟ್ಟಡದ ಒಳಗಡೆ ಇನ್ನೂ ಕೆಲವಷ್ಟು ಜನರು ಜೀವಂತವಾಗಿದ್ದಾರೆ ಎಂಬ ಸುಳಿವು ಬೆನ್ನಟ್ಟಿದ ರಕ್ಷಣಾ ಸಿಬ್ಬಂದಿ, ದಿಲೀಪ್‌ ಕೊಕರೆ(35) ಮತ್ತು ಸಂಗೀತಾ(33) ದಂಪತಿಯನ್ನು ರಕ್ಷಿಸಿದರು.

ಇವರು ಹೊರಬಂದು ಇನ್ನೂ ಕೆಲವಷ್ಟು ಜನರು ಜೀವಂತವಿದ್ದಾರೆ ಎಂಬ ಮಾಹಿತಿ ನೀಡಿದಾಗ ಮತ್ತೆ ಸೂಕ್ಷ್ಮ ಕಾರ್ಯಾಚರಣೆಗೆ ಇಳಿದ ಎನ್‌ಡಿಆರ್‌ಎಫ್‌ ಸಿಬ್ಬಂದಿ ಹೊನ್ನಮ್ಮ ಕಮಸೋಲ(45) ಎಂಬ ಮಹಿಳೆಯನ್ನು ಸಂಜೆ ವೇಳೆಗೆ ಜೀವಂತವಾಗಿ ರಕ್ಷಿಸಿ ಹೊರ ತಂದರು. ಅವರ ಕಾಲಿಗೆ ಬಲವಾದ ಏಟು ಬಿದ್ದಿದ್ದರಿಂದ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಕಟ್ಟಡ ಅವಶೇಷಗಳ ತಳ ಮಹಡಿಯಲ್ಲಿ ಇನ್ನೂ 15ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಎನ್‌ಡಿಆರ್‌ಎಫ್‌ ಸಿಬ್ಬಂದಿ ಹೇಳಿದ್ದು, ಶುಕ್ರವಾರ ರಾತ್ರಿ ಮತ್ತೆ ಚುರುಕು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಚಿವರ ನೆನೆದ ಗಾಯಾಳುಗಳು: ಈ ಮಧ್ಯೆ ಮೂರು ದಿನಗಳ ಕಾಲ ಕಟ್ಟಡ ದುರಂತದ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯಾಚರಣೆಗೆ ಬೆನ್ನೆಲುಬಾಗಿ ನಿಂತಿದ್ದ ಪೌರಾಡಳಿತ ಸಚಿವ ಸಿ.ಎಸ್‌.ಶಿವಳ್ಳಿ ಅವರ ನಿಧನದಿಂದಾಗಿ ಅವರ ಅಭಿಮಾನಿಗಳು ಮತ್ತು ಅವರಿಂದ ಸಾಂತ್ವನದ ನುಡಿ ಕೇಳಿದ ಗಾಯಾಳುಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಮೊದಲ ದಿನ ಗಾಯಾಳುಗಳ ಆರೋಗ್ಯ ವಿಚಾರಸಿದ್ದ ಸಚಿವರು, ಪ್ರತಿಯೊಬ್ಬರ ಬಗ್ಗೆ ತೋರಿಸಿದ್ದ ಕಾಳಜಿ ನೆನೆದು, ಸಂತಾಪ ವ್ಯಕ್ತಪಡಿಸಿದರು.

2 ಲಕ್ಷ ಪರಿಹಾರ ವಿತರಣೆ
ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಧಾರವಾಡ ಡೀಸಿ ದೀಪಾ ಚೋಳನ್‌ ಶುಕ್ರವಾರ ಬೆಳಗ್ಗೆ 2 ಲಕ್ಷ ರೂ.ಚೆಕ್‌ ವಿತರಿಸಿದರು. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ|ರಾಜಕುಮರ್‌ ಖತ್ರಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು,
ಕಟ್ಟಡ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಹೆಚ್ಚಳದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳವ ಭರವಸೆ ನೀಡಿದರು.

ಆರೋಪಿಗಳು ಪೊಲೀಸ್‌ ವಶಕ್ಕೆ
ಗುರುವಾರ ಕೊಲ್ಲಾಪೂರದಲ್ಲಿ ಬಂಧನಕ್ಕೆ ಒಳಗಾಗಿದ್ದ ಕಿಲ್ಲರ್‌ ಕಟ್ಟಡದ ಎಂಜಿನಿಯರ್‌ ವಿವೇಕ್‌ ಪವಾರ್‌ಗೆ ಮಾ.25ರವರೆಗೆ ಪೊಲೀಸ್‌ ಕಸ್ಟಡಿಗೆ ವಹಿಸುವಂತೆ ಇಲ್ಲಿನ 2ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಇನ್ನುಳಿದಂತೆ ಗುರುವಾರ ತಡರಾತ್ರಿ ಪೊಲೀಸರಿಗೆ ಶರಣಾದ ಕಟ್ಟಡ ಮಾಲೀಕರಾದ ಗಂಗಾಧರ ಶಿಂತ್ರಿ, ಬಸವರಾಜ ನಿಗದಿ, ರವಿ ಸಬರದ, ಮಹಾಬಳೇಶ್ವರ ಪುರದಗುಡಿ ಅವರು ಕೂಡ ಪೊಲೀಸ್‌ ವಶದಲ್ಲಿದ್ದು ಅವರನ್ನು ಪೊಲೀಸರು ಶೀಘ್ರವೇ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಧಾರವಾಡದಲ್ಲಿ ಕಟ್ಟಡ ದುರಂತ ನಡೆದಿರುವುದು ವಿಷಾದನೀಯ ಸಂಗತಿ. ಮೃತರ ಕುಟುಂಬಗಳಿಗೆ ಭಗವಂತ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಈ ಘಟನೆಯಲ್ಲಿ ಗಾಯಗೊಂಡ ಎಂಟು ಜನರಿಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ● ಡಾ|ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಧರ್ಮಾಧಿಕಾರಿ
 

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.