J.P.Nadda ವಿರುದ್ದದ ಎಫ್ಐಆರ್ ರದ್ದು ಮಾಡಿದ ಧಾರವಾಡ ಹೈಕೋಟ್೯
Team Udayavani, Aug 7, 2023, 8:15 PM IST
ಧಾರವಾಡ : ವಿಧಾನಸಭಾ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಭಾರತಿಯ ಜನತಾ ಪಕ್ಷದ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಧಾರವಾಡ ಹೈಕೋರ್ಟ್ ಪೀಠವು ಸೋಮವಾರ ರದ್ದುಪಡಿಸಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ 2023 ಮೇ 7 ರಂದು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರಾರ್ಥವಾಗಿ ಜರುಗಿದ ರೋಡ್ ಶೋ ಸಂದರ್ಭದಲ್ಲಿ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮತದಾರರಿಗೆ ಆಮಿಷ ಹಾಗೂ ಬೆದರಿಕೆ ಒಡ್ಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಚುನಾವಣಾಧಿಕಾರಿಗಳಿಂದ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮ್ಮ ವಿರುದ್ಧ ಆಧಾರ ರಹಿತವಾಗಿ ದಾಖಲಾದ ಎಫ್ಐಆರ್ ಅನ್ನು ರದ್ದುಪಡಿಸುವಂತೆ ಹೈಕೋರ್ಟ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಕೈಗೊಂಡ ನ್ಯಾ. ಎಂ. ನಾಗಪ್ರಸನ್ ಅವರಿದ್ದ ಏಕಸದಸ್ಯ ಪೀಠವು, ಅರ್ಜಿದಾರರು ರಾಜ್ಯಸಭಾ ಸದಸ್ಯರಾಗಿದ್ದು ದೂರು ದಾಖಲಿಸಲು ಮ್ಯಾಜಿಸ್ಟೇಟ್ ನ್ಯಾಯಾಲಯದಿಂದ ಅನುಮತಿ ಪಡೆಯಬೇಕು. ಹೀಗೆ ಅನುಮತಿ ಪಡೆಯುವಲ್ಲಿಯೂ ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಿದೆ.
ಇದಲ್ಲದೇ ದಾಖಲಾದ ದೂರಿನಲ್ಲಿಯೂ ಅರ್ಜಿದಾರರು ಮತದಾರರಿಗೆ ಆಮಿಷ ಹಾಗೂ ಬೆದರಿಕೆ ನೀಡುವಂತಹ ಹೇಳಿಕೆ ಕಂಡುಬಂದಿಲ್ಲ. ಹೀಗಾಗಿ ದಾಖಲಾದ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂಬುದಾಗಿ ಹೇಳಿದ ನ್ಯಾಯಪೀಠವು, ಜೆ.ಪಿ. ನಡ್ಡಾ ವಿರುದ್ಧದ ಎಫ್ಐಆರ್ ಅನ್ನು ರದ್ದುಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ