ಮಾನವ ಹಕ್ಕುಗಳ ಆಯೋಗಕ್ಕೆ ಡಿ.ಎಚ್.ವಘೇಲಾ ಅಧ್ಯಕ್ಷ
Team Udayavani, Jan 3, 2018, 9:17 AM IST
ಬೆಂಗಳೂರು: ಐದೂವರೆ ವರ್ಷದಿಂದ ಖಾಲಿ ಇದ್ದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರನ್ನು ನೇಮಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ ಅವರು, ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಘೇಲಾ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ ಎಂದರು. ಮಾನವ ಹಕ್ಕುಗಳ ಆಯೋಗಕ್ಕೆ ಇಬ್ಬರು ಸದಸ್ಯರನ್ನು ನೇಮಿಸಬೇಕಿದ್ದು ಹಲವರ ಹೆಸರು ಚರ್ಚಿಸಲಾಗಿದೆ ಎಂದು ತಿಳಿಸಿದರು. ನಿವೃತ್ತ ಡಿಜಿಪಿ ರೂಪ್ಕುಮಾರ್ ದತ್ತ ಅವರ
ಹೆಸರು ಪರಿಶೀಲನೆಯಲ್ಲಿದೆ ಎಂದು ಹೇಳಲಾಗಿದೆ.
ನ್ಯಾ.ಎಸ್.ಆರ್.ನಾಯಕ್ ಅವರ ನಂತರ ಮಾನವ ಹಕ್ಕುಗಳ ಆಯೋಗಕ್ಕೆ ಖಾಯಂ ಅಧ್ಯಕ್ಷರ ನೇಮಕಾತಿಯಾಗಿರಲಿಲ್ಲ. ಆದರೆ, ನಿವೃತ್ತ ಐಎಎಸ್ ಅಧಿಕಾರಿ ಮೀರಾ ಸಕ್ಸೇನಾ ಅವರು ಹಂಗಾಮಿ ಅಧ್ಯಕ್ಷರಾಗಿದ್ದರು. ನವೆಂಬರ್ನಲ್ಲಿ ಮೀರಾ ಸಕ್ಸೇನಾ ಹಾಗೂ ಸದಸ್ಯ ಸಿ.ಜಿ.ಹುನಗುಂದ್ ಅವರ ಅವಧಿ ಮುಗಿದಿತ್ತು. ಡಿ.ಎಚ್.ವಘೇಲಾ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಯಾಗಿ ಕಾರ್ಯನಿರ್ವಹಿಸಿ 2015ರಲ್ಲಿ ನಿವೃತ್ತಿಯಾ ಗಿದ್ದರು. ಗುಜರಾತ್ ಮೂಲದ ವಘೇಲಾ ಅವರ ಹೆಸರು ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಸ್ಥಾನಕ್ಕೆ ಒಂದು ವರ್ಷ ದಿಂದ ಕೇಳಿ ಬಂದಿತ್ತು.
ನಾಲ್ವರು ಆಯುಕ್ತರು
ಖಾಲಿ ಇರುವ ರಾಜ್ಯ ಮಾಹಿತಿ ಆಯುಕ್ತರ ಸ್ಥಾನ ಭರ್ತಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸುಧಾಮದಾಸ್, ಲಿಂಗರಾಜು, ಎಸ್.ಎಲ್. ಪಾಟೀಲ್ ಹಾಗೂ ಕುಮಾರಸ್ವಾಮಿ ಎಂಬುವರ ಹೆಸರು ಅಂತಿಮಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ