ಮಧುಮೇಹಿಗಳು, ಸಕ್ರಿಯ ಸೋಂಕಿತರು ಹೆಚ್ಚಿರುವುದೇ ಫಂಗಸ್ ಹೆಚ್ಚಳಕ್ಕೆ ಕಾರಣ


Team Udayavani, May 29, 2021, 8:50 AM IST

diabetes

ಬೆಂಗಳೂರು: ರಾಜ್ಯದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚಾಗಿರುವುದು ನಮಗೆ ಶಾಪವಾಗುತ್ತಿದೆಯೇ? ಇದು ಬ್ಲ್ಯಾಕ್‌ ಫಂಗಸ್‌ ನಿಯಂತ್ರಣಕ್ಕೆ ಅಡ್ಡಿಯಾಗಿದೆಯೇ? – ಹೌದು ಎನ್ನುತ್ತಾರೆ ತಜ್ಞ ವೈದ್ಯರು.

ಕಪ್ಪು ಶಿಲೀಂಧ್ರಕ್ಕೂ ಮಧುಮೇಹಕ್ಕೂ ನಂಟಿದೆ. ಅದೇ ತರಹ ಮಧುಮೇಹಕ್ಕೂ ಕರ್ನಾಟಕಕ್ಕೂ ನಂಟಿದೆ. ದೇಶದ ಒಟ್ಟಾರೆ ಮಧುಮೇಹಿಗಳಲ್ಲಿ ಶೇ.8 ರಾಜ್ಯದಲ್ಲಿದ್ದಾರೆ. ದೇಶದಲ್ಲಿ 8 ಕೋಟಿ ಇದ್ದು, ರಾಜ್ಯದಲ್ಲಿ 65 ಲಕ್ಷ ಮಂದಿ ಮಧುಮೇಹಿಗಳಿದ್ದಾರೆ. ಸದ್ಯ ದೇಶದಲ್ಲಿಯೇ ಕೊರೊನಾ ಸಕ್ರಿಯ  ಪ್ರಕರಣಗಳು ಕರ್ನಾಟಕದಲ್ಲಿ ಹೆಚ್ಚಿದ್ದು, ಮೂರು ಲಕ್ಷ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 50 ಸಾವಿರಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲಿದ್ದಾರೆ.

ಸೋಂಕು ರಾಜ್ಯದಲ್ಲಿ ಹೆಚ್ಚಿರುವುದರಿಂದ ಸೋಂಕಿತರಲ್ಲಿ ಸಾಮಾನ್ಯವಾಗಿ ಮಧುಮೇಹಿಗಳು ಕೂಡ ಹೆಚ್ಚಿದ್ದಾರೆ.ಹೀಗಾಗಿಯೇ, ಕೊರೊನಾ ಸಕ್ರಿಯ ಪ್ರಕರಣಗಳು ಜತೆಗೆ ಮಧುಮೇಹ  ಪ್ರಕರಣಗಳಲ್ಲಿ ರಾಜ್ಯ ಮುಂಚೂಣಿಯಲ್ಲಿರುವುದು ಶಾಪವಾಗಿದ್ದು, ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಮುಖ್ಯವಾಗಿ ಸೋಂಕು ಗಂಭೀರವಾಗಿರುವರಲ್ಲಿ ಮಧುಮೇಹಿಗಳೇ ಹೆಚ್ಚಿದ್ದು, ಅದರಲ್ಲಿಯೇ ಫಂಗಸ್‌ ಹೆಚ್ಚು ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

ಸಕ್ರಿಯ ಪ್ರಕರಣಗಳು ಹೆಚ್ಚಿರುವ ಮೈಸೂರು, ತುಮಕೂರು, ಧಾರವಾಡ, ಶಿವಮೊಗ್ಗ, ಕಲಬುರಗಿ, ಕೋಲಾರ, ವಿಜಯಪುರದಲ್ಲಿ ಹೆಚ್ಚಿವೆ. ಇನ್ನು ಒಟ್ಟಾರೆ ಫಂಗಸ್‌ ಪ್ರಕರಣಗಳು ಒಂದು ವಾರದಲ್ಲಿಯೇ ನಾಲ್ಕು ಪಟ್ಟು ಹೆಚ್ಚಳವಾಗಿ ಒಂದು ಸಾವಿರ ಗಡಿದಾಟಿವೆ. ಫಂಗಸ್‌ ಪ್ರಕರಣ ಹೆಚ್ಚಿರುವ ರಾಜ್ಯಗಳಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ.

ಮಧುಮೇಹಿಗಳಲ್ಲಿ ಯಾಕೆ ಹೆಚ್ಚು?: ರೋಗ ನಿರೋಧಕಶಕ್ತಿ ಕಡಿಮೆ ಇರುವವರಿಗೆ ಮಾತ್ರ ಫಂಗಸ್‌ ಹಾನಿ ಮಾಡುತ್ತದೆ. ಮಧುಮೇಹಿಗಳಲ್ಲಿ ಸಾಮಾನ್ಯ ಜನರಿಗೆ ಹೋಲಿಸಿದರೆ ಮೊದಲೇ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಅವರಿಗೆ ಸ್ಟಿರಾಯ್ಡ ನೀಡುವುದರಿಂದ ಅಡ್ಡಪರಿಣಾಮವಾಗಿ ಮಧುಮೇಹ ಮತ್ತಷ್ಟು ಹೆಚ್ಚಳವಾಗುತ್ತದೆ. ಇದರಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಎಂದು ಮಧುಮೇಹಿಗಳ ಸಂಶೋ ಧನಾ ಸಂಸ್ಥೆಯ ಸದಸ್ಯ ತಜ್ಞ ಡಾ.ಅರವಿಂದ್‌ ತಿಳಿಸಿದ್ದಾರೆ.

ಮಧುಮೇಹಿಗಳು ಎರಡು ವಾರ ಎಚ್ಚರ: ಗುಣಮುಖರಾದವರಲ್ಲಿಯೂ ಫಂಗಸ್‌ ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಮಧುಮೇಹಿಗಳು ಕನಿಷ್ಠ 2 ವಾರ ಮುನ್ನೆಚ್ಚರಿಕೆ ವಹಿಸಬೇಕು. ಅನಗತ್ಯ ಓಡಾಟ ಮಾಡಬಾರದು. ಸ್ವತ್ಛತೆ ಕಾಪಾಡಿಕೊಳ್ಳಬೇಕು. ಮಧುಮೇಹ ನಿಯಂತ್ರಣಕ್ಕೆ ಒತ್ತು ನೀಡಬೇಕು. ಫಂಗಸ್‌ ಲಕ್ಷಣ ಕಾಣಿಸಿಕೊಂಡರೆ ತಡ ಮಾಡದೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಖ್ಯಾತ ವೈದ್ಯ ಎಚ್‌.ಅಂಜನಪ್ಪ ತಿಳಿಸಿದ್ದಾರೆ.

ಬಹುತೇಕರು ಲಸಿಕೆ ಪಡೆದಿಲ್ಲ: ಬ್ಲ್ಯಾಕ್‌ ಫಂಗಸ್‌ ಸೋಂಕಿತರಲ್ಲಿ ಶೇ.90ರಷ್ಟು ಮಧು ಮೇಹಿಗಳು ಎಂಬ ಅಂಶವು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅಧ್ಯಯನದಿಂದ ತಿಳಿದುಬಂದಿದೆ. ಜತೆಗೆ ಫ‌ಂಗಸ್‌ ಸೋಂಕಿತರಲ್ಲಿ ಶೇ.80 ಮಂದಿ ಲಸಿಕೆ ಪಡೆದಿಲ್ಲ ಎಂದು ಹೇಳಿದ್ದಾರೆ. ಶೇ.5ಕ್ಕಿಂತಲೂ ಕಡಿಮೆ ಮಂದಿ ಕೊರೊನಾ ಲಸಿಕೆ ಪಡೆದಿದ್ದಾರೆ ಎಂಬುದು ಪ್ರಾಥಮಿಕ ಅಧ್ಯಯನದಿಂದ ತಿಳಿದು ಬಂದಿದೆ ಎಂದು ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ.ಸುಜಾತಾ ರಾಥೋಡ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಗಂಭೀರವಾಗಿ ಐಸಿಯು ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮಧುಮೇಹಿಗಳ ಪಾಲು ಹೆಚ್ಚಿದೆ. ಅದೇ ಕಾರಣಕ್ಕೆ ಬ್ಲ್ಯಾಕ್‌  ಫಂಗಸ್‌ ಪ್ರಕರಣಗಳು ಹೆಚ್ಚಿವೆ. ಫಂಗಸ್ ಸೋಂಕಿತರಲ್ಲಿ ಮಧುಮೇಹಿಗಳು ಶೇ.80ಕ್ಕೂ ಅಧಿಕ.- ಡಾ.ಭುಜಂಗ ಶೆಟ್ಟಿ. ಸರ್ಕಾರ ಸಲಹಾ ಸಮಿತಿ ಸದಸ್ಯರು, ನೇತ್ರತಜ್ಞರು

ದೇಶದ ಒಟ್ಟಾರೆ ಮಧುಮೇಹಿಗಳಲ್ಲಿ ಕರ್ನಾಟದ ಪಾಲು ಶೇ.8ರಷ್ಟಿದೆ. ಸೋಂಕು ತಗುಲಿ, ಚಿಕಿತ್ಸೆ ಸ್ಟಿರಾಯ್ಡ ನೀಡುವುದರಿಂದ ಮಧುಮೇಹ ಇನ್ನಷ್ಟು ಹೆಚ್ಚಾಗುತ್ತದೆ. ಇದು ಫಂಗಸ್‌ಗೆ ಕಾರಣವಾಗಿದೆ.- ಡಾ.ಅರವಿಂದ್‌, ಸದಸ್ಯರು, ಭಾರತೀಯ ಮಧುಮೇಹ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ (ಆರ್‌ ಎಸ್‌ಎಸ್‌ಡಿಐ)

 

ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.