ದೇವೇಗೌಡರು ಹೇಳಿದಂತೆ ನಡೆದಿದ್ದಾರಾ?: ರಾಜಣ್ಣ
Team Udayavani, Jun 29, 2019, 3:00 AM IST
ಬೆಂಗಳೂರು: “ಮಾಜಿ ಪ್ರಧಾನಿ ದೇವೇಗೌಡರು ದೊಡ್ಡವರು. ಅವರು ಯಾವಾಗಾದರೂ ಹೇಳಿದಂತೆ ನಡೆದುಕೊಂಡಿದ್ದಾರೆಯೇ?’ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ.
ಮಧ್ಯಂತರ ಚುನಾವಣೆ ಕುರಿತು ದೇವೇಗೌಡರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ದೇವೇಗೌಡರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಿದ್ದರು. ಆ ನಂತರ ಬಾಂಡ್ ಪೇಪರ್ ಎಲ್ಲಿದೆ ಎಂದು ಕೇಳಿದರು. ಈಗ ಕಾಂಗ್ರೆಸ್ನವರಿಗೆ ಬಾಂಡ್ ಪೇಪರ್ ಬರೆದುಕೊಟ್ಟಿದ್ದಾರೆಯೋ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದರು.
“ಮೋದಿಗೆ ಮತ ಹಾಕಿ ನಮಗೆ ಕೆಲಸ ಕೇಳುತ್ತೀರಾ’ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಯಾವುದೇ ಪಕ್ಷಕ್ಕೆ ಸೀಮಿತವಾದವರಲ್ಲ. ಅವರು ರಾಜ್ಯದ ಜನತೆಗೆ ಮುಖ್ಯಮಂತ್ರಿ. ಜೆಡಿಎಸ್ನವರು ಇರುವುದೇ 37 ಶಾಸಕರು. ಇವರ ಪರ ಜನಾಭಿಪ್ರಾಯ ಇದೆಯಾ ಎಂದು ಪ್ರಶ್ನಿಸಿದರು.
ಇದೇ ವೇಳೆ, ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡ ರಾಜಣ್ಣ, ಸಿದ್ದರಾಮಯ್ಯ ಆ ರೀತಿ ಹೇಳಲು ಸಾಧ್ಯವಿಲ್ಲ. ಅವರು ಕೇವಲ ಕುರುಬರಿಗೆ ಮಾತ್ರ ಅಕ್ಕಿ ಕೊಟ್ಟಿದ್ದರಾ ? ಒಂದೇ ಸಮುದಾಯಕ್ಕೆ ಸಾಲ ಮನ್ನಾ ಮಾಡಿದ್ದಾರಾ ? ಅದರ ಸೌಲಭ್ಯವನ್ನು ಮೇಲ್ಜಾತಿಯವರೇ ಹೆಚ್ಚು ಪಡೆದುಕೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ