ಸೂಕ್ತ ಸಮಯಕ್ಕೆ ಖರೀದಿ ಕೇಂದ್ರ ತೆರೆಯಲು ಶಾಸಕ ದಿನೇಶ್ ಗೂಳಿಗೌಡ ಆಗ್ರಹ


Team Udayavani, Apr 21, 2023, 5:26 PM IST

ಸೂಕ್ತ ಸಮಯಕ್ಕೆ ಖರೀದಿ ಕೇಂದ್ರ ತೆರೆಯಲು ಶಾಸಕ ದಿನೇಶ್ ಗೂಳಿಗೌಡ ಆಗ್ರಹ

ಬೆಂಗಳೂರು: 2022-23ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಮತ್ತು ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಭಾರಿ ಕುಸಿತಕಂಡಿದ್ದು, ಇದಕ್ಕೆ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಕಳೆದ ಸಾಲಿನಲ್ಲಿ 20 ಲಕ್ಷ ಕ್ವಿಂಟಾಲ್ ಭತ್ತ ಹಾಗೂ 5 ಲಕ್ಷ ಕ್ವಿಂಟಾಲ್ ರಾಗಿಯನ್ನು ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲಾಗಿತ್ತು. ಆದರೆ, ಈ ಸಾಲಿನಲ್ಲಿ 79 ಸಾವಿರ ಕ್ವಿಂಟಾಲ್ ಭತ್ತ ಖರೀದಿಯಾಗಿದ್ದರೆ, 3.29 ಲಕ್ಷ ಕ್ವಿಂಟಾಲ್ ರಾಗಿ ಖರೀದಿಯಾಗಿದೆ. ಹೀಗಾಗಿ ಮುಂದಿನ ಸಾರಿಯಾದರೂ ಸೂಕ್ತ ಸಮಯದಲ್ಲಿ ಸರ್ಕಾರ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮಂಡ್ಯ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಶಾಸಕ ದಿನೇಶ್‌ ಗೂಳಿಗೌಡ ಅವರು ಆಗ್ರಹಿಸಿದ್ದಾರೆ.

ಈಗಾಗಲೇ ಬೆಲೆ ಕುಸಿತ ಹಾಗೂ ರಾಸಾಯನಿಕ ಗೊಬ್ಬರಗಳ, ಕೀಟನಾಶಕಗಳ ಬೆಲೆ ಏರಿಕೆಯಾಗಿದೆ. ಜೊತೆಗೆ ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದ್ದು, ರೈತನ ಬದುಕು ದುಸ್ತರವಾಗಿದ್ದಲ್ಲದೆ, ಆತ್ಯಹತ್ಯೆ ಹಾದಿ ಹಿಡಿಯುವಂತಾಗುತ್ತಿದೆ. ಕೃಷಿ ವಲಯ ಸಂಕಷ್ಟಕ್ಕೆ ಸಿಲುಕಿ ನಷ್ಟದ ದಾರಿ ಹಿಡಿದಿದೆ. ಕೃಷಿ ಕಾರ್ಮಿಕರ ಕೊರತೆಯು ಕೂಡ ತೀವ್ರವಾಗಿ ರೈತರನ್ನು ಕಾಡುತ್ತಿದೆ. ಈ ಮಧ್ಯೆ ಸರ್ಕಾರ ಹಾಗೂ ಸರ್ಕಾರದ ಆದೇಶವನ್ನು ಅನುಷ್ಠಾನಕ್ಕೆ ತರುವ ಅಧಿಕಾರಿಗಳು ಇದನ್ನು ಪಾಲಿಸದೇ ಇದ್ದರೆ ಏನು ಗತಿ? ಹೀಗಾಗಿ ಸೂಕ್ತ ಸಮಯದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪನೆ ಹೇಗೆ ಮುಖ್ಯವೋ ಅದರ ನಿಷ್ಪಕ್ಷಪಾತ ನಿರ್ವಹಣೆಯೂ ಅಷ್ಟೇ ಮುಖ್ಯವಾಗುತ್ತದೆ ಎಂಬುದು ಎಲ್ಲರ ಗಮನದಲ್ಲಿರಬೇಕು ಎಂದು ಆಗ್ರಹಿಸಿದರು.

ಭತ್ತ ಹಾಗೂ ರಾಗಿ ಖರೀದಿ ವಿಷಯದಲ್ಲಿ ಕಳೆದ ಬಾರಿಯ ಖರೀದಿ ಪ್ರಕ್ರಿಯೆಗೆ ಹೋಲಿಕೆ ಮಾಡಿದರೆ ಈ ಬಾರಿ ಸರ್ಕಾರದಿಂದ ನಡೆದಿರುವ ಖರೀದಿಯು ಏನೇನೂ ಅಲ್ಲ. ಅದರಲ್ಲೂ ಭತ್ತ ಖರೀದಿಯಲ್ಲಂತೂ ಭಾರಿ ವಿಳಂಬ ನೀತಿ, ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ 79,302 ಕ್ವಿಂಟಾಲ್ ಅಷ್ಟೇ ಭತ್ತ ಖರೀದಿಯಾಗಿದೆ. ಅಂದರೆ, ಕಳೆದ ಬಾರಿಗೆ ಹೋಲಿಸಿದರೆ 19.20 ಲಕ್ಷ ಕ್ವಿಂಟಾಲ್ ವ್ಯತ್ಯಾಸ ಕಂಡುಬಂದಿದೆ. ಕಳೆದ ಬಾರಿ 5 ಲಕ್ಷ ಕ್ವಿಂಟಾಲ್ ರಾಗಿ ಖರೀದಿಯಾಗಿತ್ತು. ಆದರೆ, ಈ ಬಾರಿ 329979 ಕ್ವಿಂಟಾಲ್ ರಾಗಿ ಖರೀದಿಯಾಗಿದೆ. ಅಂದರೆ, 1.70 ಲಕ್ಷ ಕ್ವಿಂಟಾಲ್ ವ್ಯತ್ಯಾಸ ಕಂಡುಬಂದಿದೆ. ಇದು ರೈತರ ಜನಜೀವನದ ಮೇಲೆ ಭಾರಿ ಪರಿಣಾಮವನ್ನೇ ಬೀರುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ರೈತರಿಗೆ ನಷ್ಟ- ಶಾಸಕರ ಕಳವಳ

ಇದಕ್ಕೆ ಕಾರಣವೂ ನಮ್ಮ ಕಣ್ಣೆದುರಿಗೇ ಕಾಣುತ್ತದೆ. ಇಳುವರಿ ಬರುವ ಇಲ್ಲವೇ ಕಟಾವು ಮಾಡುವ ಸಂದರ್ಭದಲ್ಲಿ ನಿಗದಿತ ವೇಳೆಯಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ತೆರೆಯದೇ ಇರುವುದು ಬಹುಮುಖ್ಯ ಕಾರಣವಾಗಿರುತ್ತದೆ. ಏಕೆಂದರೆ ರೈತರು ಮೊದಲೇ ಸಾಲ-ಸೋಲ ಮಾಡಿ ಬೆಳೆ ಬೆಳೆದಿರುತ್ತಾನೆ. ಆತನಿಗೆ ಕಟಾವು ಆದ ತಕ್ಷಣವೇ ಒಂದಷ್ಟು ಸಾಲ ತೀರಿಸುವ ಸೇರಿದಂತೆ ಇನ್ನಿತರ ಖರ್ಚು ವೆಚ್ಚಗಳನ್ನು ನೋಡಿಕೊಳ್ಳುವ ಅನಿರ್ವಾಯತೆ ಎದುರಾಗಿರುತ್ತದೆ. ಆದರೆ, ಕಟಾವು ಆದ ಸಂದರ್ಭದಲ್ಲಿ ಸರ್ಕಾರ ಇಲ್ಲವೇ ಅಧಿಕಾರಿಗಳು ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ತೆರೆಯದೇ ಹೋದಲ್ಲಿ ರೈತರು ಅನಿವಾರ್ಯವಾಗಿ ಹೊರಗಡೆ ಮಾರುಕಟ್ಟೆಯಲ್ಲಿ ಬೆಳೆಯನ್ನು ಮಾರಾಟ ಮಾಡಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ನಿಗದಿತ ಸಮಯದಲ್ಲಿ ಖರೀದಿ ಕೇಂದ್ರ ತೆರೆಯಲು ಸಲಹೆ

ಬೆಳೆಯನ್ನು ಮಾರಾಟ ಮಾಡುವ ವೇಳೆ ದಲ್ಲಾಳಿಗಳು ಕೇಳುವ ದರಕ್ಕೆ ಅಂದರೆ ಕಡಿಮೆ ದರಕ್ಕೆ ಮಾರಾಟ ಮಾಡಿ ನಷ್ಟವನ್ನು ಅನುಭವಿಸುವ ಸ್ಥಿತಿ ಬಂದೊದಗಿದೆ. ಯಾವುದೇ ಬೆಳೆಯಾಗಲಿ, ಅದು ಯಾವ ಸಂದರ್ಭದಲ್ಲಿ ಇಳುವರಿ ಬರುತ್ತದೆ, ಕಟಾವು ಆಗುತ್ತದೆ ಎಂಬ ಅರಿವು ಸರ್ಕಾರ ಸಹಿತ ಅಧಿಕಾರಿಗಳಿಗೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮುಂದಿನ ಕಟಾವು ಅವಧಿಯಲ್ಲಾದರೂ ಸೂಕ್ತ ಸಂದರ್ಭದಲ್ಲಿ ಭತ್ತ ಹಾಗೂ ರಾಗಿಗೆ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ದಿನೇಶ್ ಗೂಳಿಗೌಡ ಅವರು ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.