ದಿನೇಶ್ ಗುಂಡುರಾವ್ ಕೆಪಿಸಿಸಿ ಅಧ್ಯಕ್ಷ, ಖಂಡ್ರೆ ಕಾರ್ಯಾಧ್ಯಕ್ಷ
Team Udayavani, Jul 4, 2018, 3:19 PM IST
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಗಾಂಧಿನಗರ ಶಾಸಕ , ಮಾಜಿ ಸಚಿವ ದಿನೇಶ್ ಗುಂಡುರಾವ್ ಅವರನ್ನು ಎಐಸಿಸಿ ನೇಮಕಗೊಳಿಸಿದೆ. ಸಚಿವ ಸ್ಥಾನ ವಂಚಿತರಾಗಿದ್ದ ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಸಮಾಧಾನ ಪಡಿಸಲಾಗಿದೆ.
8 ವರ್ಷಗಳಿಂದ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಸಮರ್ಥವಾಗಿ ಹುದ್ದೆ ನಿರ್ವಹಿಸಿದ ಡಿಸಿಎಂ ಪರಮೇಶ್ವರ್ ಅವರಿಗೆ ಎಐಸಿಸಿ ಧನ್ಯವಾದ ಹೇಳಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹಲೋಟ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉಇಬ್ಬರನ್ನು ನೇಮಕಗೊಳಿಸಿರುವ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ .
ದಿನೇಶ್ ಗುಂಡು ರಾವ್ ಅವರು ಕುಟುಂಬ ಸಮೇತ ಶೃಂಗೇರಿಗೆ ತೆರಳಿದ್ದು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಭಾರತೀ ತೀರ್ಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಅವರು ಸಚಿವ ಸ್ಥಾನ ಸಿಗದೆ ಇದ್ದ ಕಾರಣ ತೀವ್ರ ಅಸಮಾಧಾನ ಹೊರ ಹಾಕಿದ್ದರು. ಅವರು ವೀರಶೈವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ