ಇದು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಯಿತು: ದಿನೇಶ್ ಗುಂಡೂರಾವ್
Team Udayavani, Oct 11, 2021, 11:39 AM IST
ಬೆಂಗಳೂರು: ದೇಶದೆಲ್ಲೆಡೆ ಏಕಾಏಕಿ ಕಲ್ಲಿದ್ದಲು ಕೊರತೆ ಉಂಟಾಗಿರುವುದು ಆಶ್ಚರ್ಯಕರ. ಕಲ್ಲಿದ್ದಿಲಿನ ಅಭಾವ ರಾಜ್ಯದ ಮೇಲೂ ತಟ್ಟಿದೆ ರಾಜ್ಯದ ಮೂರು ವಿದ್ಯುತ್ ಕೇಂದ್ರಗಳು ಅವಲಂಬಿತವಾಗಿರುವುದು ಕಲ್ಲಿದ್ದಿಲಿನ ಮೇಲೆ. ಈ ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದಿಲು ಪೂರೈಕೆಯಾಗದಿದ್ದರೆ, ಉತ್ಪಾದನೆ ಸ್ಥಗಿತಗೊಳ್ಳಲಿದೆ. ಆಗ ರಾಜ್ಯ ಕತ್ತಲಲ್ಲಿ ಮುಳುಗುವುದು ನಿಶ್ಚಿತ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ತನಗೆಷ್ಟು ಕಲ್ಲಿದ್ದಲು ಬೇಕು ಎಂದು ಅಂದಾಜಿಸಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ಈಗ ಕಲ್ಲಿದ್ದಿಲು ಪೂರೈಕೆ ಮಾಡುವಂತೆ ಕೇಂದ್ರಕ್ಕೆ ದುಂಬಾಲು ಬೀಳುತ್ತಿದೆ. ಈ ಕೆಲಸ ಮೊದಲೇ ಮಾಡಬೇಕಿತ್ತಲ್ಲವೆ.? ಮಳೆಗಾಲ ಮುಗಿಯುವ ಹಂತದಲ್ಲಿ ಇವರಿಗೆ ಜ್ಞಾನದೋಯವಾಯಿತೆ ಎಂದು ಅವರು ಪ್ರಶ್ನಿಸಿದ್ದಾರೆ.
ಪರಿಸರ ಮಾಲಿನ್ಯಕ್ಕೆ ಕಲ್ಲಿದ್ದಿಲಿನ ಅತಿಯಾದ ಬಳಕೆಯೂ ಒಂದು ಕಾರಣ. ಆದರೆ ಪರ್ಯಾಯ ವ್ಯವಸ್ಥೆಯಿಲ್ಲದೆ ಕಲ್ಲಿದ್ದಿಲಿನ ಬಳಕೆಯನ್ನು ಏಕಾಏಕಿ ಕಡಿಮೆ ಮಾಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಿ, ಕಲ್ಲಿದ್ದಿಲಿನ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಬೇಸಗೆಯಲ್ಲಿ ಇಡೀ ರಾಜ್ಯವೇ ತತ್ತರಿಸಿ ಹೋಗಲಿದೆ ಎಂದಿದ್ದಾರೆ.
ಇದನ್ನೂ ಓದಿ:ಮದುವೆ ವಿಚಾರಕ್ಕಾಗಿ ಹಿಂದು ಯುವಕ, ಯುವತಿಯರು ಮತಾಂತರವಾಗುವುದು ತಪ್ಪು: ಭಾಗವತ್
ಮಳೆಗಾಲ ಮುಗಿಯುವ ಹಂತದಲ್ಲಿರುವಾಗ ಜಲ ವಿದ್ಯುತ್ ಮೇಲೆ ಹೆಚ್ಚು ಅವಲಂಬನೆ ಸಾಧ್ಯವಿಲ್ಲ. ಜಲಾಶಯಗಳಲ್ಲಿ ಒಳಹರಿವು ಕಡಿಮೆಯಾದಂತೆ ವಿದ್ಯುತ್ ಉತ್ಪಾದನೆಯೂ ಕುಸಿಯಲಿದೆ. ಆಗ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳೇ ಆಧಾರ. ವಿದ್ಯುತ್ ಉತ್ಪಾದನೆ ಗಂಭೀರ ಸಮಸ್ಯೆಯಾಗುವ ಮೊದಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಯುದ್ಧಕಾಲೇ ಶಸ್ತ್ರಾಭ್ಯಾಸ ಎಂಬಂತಾಗಬಾರದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…