ಕೋವಿಡ್ ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲವೆ? ದಿನೇಶ್ ಗುಂಡೂರಾವ್ ಪ್ರಶ್ನೆ
ಉದಯವಾಣಿ ವರದಿ ಉಲ್ಲೇಖಿಸಿ ಸರ್ಕಾರಕ್ಕೆ ಪ್ರಶ್ನಿಸಿದ ದಿನೇಶ್ ಗುಂಡೂರಾವ್
Team Udayavani, Oct 18, 2020, 12:47 PM IST
ಬೆಂಗಳೂರು: ಕೋವಿಡ್-19 ವಿರುದ್ಧ ಹೋರಾಡಿ ಹುತಾತ್ಮರಾದ 500ಕ್ಕೂ ಹೆಚ್ಚು ಕೋವಿಡ್ ವಾರಿಯರ್ಸ್ಗಳ ಪೈಕಿ ಕೇವಲ ಒಬ್ಬರಿಗೆ ಮಾತ್ರ ಪರಿಹಾರ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಚಾರ. ಕೋವಿಡ್-19 ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲವೆ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
“ಉದಯವಾಣಿ” ಪತ್ರಿಕೆಯಲ್ಲಿ ಇಂದು ಪ್ರಕಟವಾದ “ಹುತಾತ್ಮರು 500+ ಆದರೆ ಪರಿಹಾರ ಸಿಕ್ಕಿದ್ದು ಒಬ್ಬರ ಕುಟುಂಬಕ್ಕೆ ಮಾತ್ರ” ಎಂಬ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕೋವಿಡ್-19 ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲದೇ ಇರುವಾಗ ವಾರಿಯರ್ಸ್ಗಳು ಜೀವದ ಹಂಗು ತೊರೆದು ಸೋಂಕಿನ ವಿರುದ್ಧ ಹೋರಾಡಲು ಹೇಗೆ ಸಾಧ್ಯ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪ್ರಾಣಾಪಾಯದ ನಡುವೆಯೂ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೋವಿಡ್ ವಾರಿಯರ್ಸ್ಗಳ ಕರ್ತವ್ಯವನ್ನು ಸರ್ಕಾರ ಗೌರವಿಸಬೇಕು. ಸೋಂಕಿನ ವಿರುದ್ಧ ಹೋರಾಡಿ ಹುತಾತ್ಮರಾಗಿರುವ ಸೇನಾನಿಗಳ ಕುಟುಂಬ ಬೀದಿಗೆ ಬಂದಿದೆ. ಸರ್ಕಾರ ಕೂಡಲೆ ಹುತಾತ್ಮ ಸೇನಾನಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕೊರೋನಾ ವಿರುದ್ಧ ಹೋರಾಡಿ ಹುತಾತ್ಮರಾದ 500+ ಕೊರೋನಾ ವಾರಿಯರ್ಸ್ಗಳ ಪೈಕಿ ಕೇವಲ ಒಬ್ಬರಿಗೆ ಮಾತ್ರ ಪರಿಹಾರ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಚಾರ.
ಕೊರೋನಾ ಸೇನಾನಿಗಳ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲವೆ?
ಹೀಗಿರುವಾಗ ವಾರಿಯರ್ಸ್ಗಳು ಜೀವದ ಹಂಗು ತೊರೆದು ಸೋಂಕಿನ ವಿರುದ್ಧ ಹೋರಾಡಲು ಹೇಗೆ ಸಾಧ್ಯ?
@BSYBJP pic.twitter.com/wbzeo2t8w5— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 18, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ