ದಿನೇಶ್ ಗುಂಡೂರಾವ್ ಬಕೆಟ್ ಹಿಡಿಯೋದು ನಿಜ: ಎಂಟಿಬಿ
Team Udayavani, Sep 29, 2019, 3:04 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕುರಿತು ಎಸ್.ಟಿ.ಸೋಮಶೇಖರ್ ಹೇಳಿರುವುದು ಸರಿಯಾಗಿಯೇ ಇದೆ ಎಂದು ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮಶೇಖರ್ ಮಾತುಗಳಿಗೆ ನನ್ನ ಸಹಮತವಿದೆ. ದಿನೇಶ್ ಗುಂಡೂರಾವ್ ಸಿದ್ದರಾಮಯ್ಯಗೆ ಬಕೆಟ್ ಹಿಡೀತಾರೆ ಎಂದರು. ದಿನೇಶ್ ಗುಂಡೂರಾವ್ ಅವರು ಸಿದ್ದರಾಮಯ್ಯ ಅವರ ಚೇಲಾ ಹೌದು, ಬಕೆಟ್ ಹಿಡಿಯುವುದೂ ಹೌದು, ಅವರಿಂದಲೇ ಪಕ್ಷ ಈ ಸ್ಥಿತಿಗೆ ಬಂದಿದೆ.
ಸೋಮಶೇಖರ್ ಹೇಳಿರುವುದು ಸತ್ಯವಾಗಿದೆ ಎಂದರು. ಕೆ.ಎಚ್.ಮುನಿಯಪ್ಪ ಸೋಲಿಗೆ ರಮೇಶ್ ಕುಮಾರ್ ಕಾರಣ. ಮುನಿಯಪ್ಪ ಅವರು ಸತ್ಯ ಮಾತನಾಡಿದ್ದಾರೆ. ಇದು ಜಗತ್ತಿಗೆ ಗೊತ್ತಿರುವ ವಿಚಾರ. ರಮೇಶ್ಕುಮಾರ್ ವಿರುದ್ಧ ಕ್ರಮ ಯಾಕೆ ಇಲ್ಲ ಎಂದು ಪ್ರಶ್ನಿಸಿದರು. ಚುನಾವಣಾ ಆಯೋಗದ ದಿನಾಂಕ ನಿಗದಿಪಡಿಸಿರುವುದು ಹಾಗೂ ಸುಪ್ರೀಂಕೋರ್ಟ್ ಕ್ರಮಕ್ಕೆ ನಮ್ಮ ಸ್ವಾಗತವಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ, ಸುಪ್ರೀಂಕೋರ್ಟ್ ತೀರ್ಪಿಗೆ ಕಾಯುತ್ತಿದ್ದೇವೆ ಎಂದು ತಿಳಿಸಿದರು.
ಹೊಸಕೋಟೆಯಲ್ಲಿ ಬಿಜೆಪಿಯಿಂದ ಶರತ್ ಬಚ್ಚೇಗೌಡ ಟಿಕೆಟ್ ಕೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣ ದಲ್ಲಿ ಪರ ವಿರೋಧ ಸಹಜ. ಎಲ್ಲವನ್ನೂ ಎದುರಿಸಲು ನಾವು ಸಿದ್ಧವಾಗಿದ್ದೇವೆ. ಟಿಕೆಟ್ ಯಾರಿಗೆ ನೀಡಲಿದೆ ಎನ್ನುವುದನ್ನು ಬಿಜೆಪಿ ಹೈಕಮಾಂಡ್ ತೀರ್ಮಾನಿ ಸಲಿದೆ. ಸುಪ್ರೀಂತೀರ್ಪಿನ ಬಳಿಕ ನನ್ನ ಮುಂದಿನ ರಾಜಕೀಯ ತೀರ್ಮಾನ ಪ್ರಕಟಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್