ಅಮೃತಜ್ಯೋತಿ ಯೋಜನೆ ಹಿಂಪಡೆದ ಸರ್ಕಾರಕ್ಕೆ ಬದ್ಧತೆಯಿಲ್ಲ: ದಿನೇಶ್ ಗುಂಡೂರಾವ್ ಟೀಕೆ
Team Udayavani, Sep 6, 2022, 10:54 AM IST
ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಕೇವಲ 15 ದಿನದ ಹಿಂದಷ್ಟೇ ಎಸ್ ಸಿ/ಎಸ್ ಟಿ ಸಮುದಾಯದ ಬಿಪಿಎಲ್ ಕಾರ್ಡ್ದಾರರಿಗೆ 75 ಯುನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ ಈಗ ಏಕಾಏಕಿ ಹಿಂಪಡೆದಿದೆ. ಬೊಮ್ಮಾಯಿ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ನಾಟಕ ಯಾಕೆ ಆಡಬೇಕು? ಕೊಟ್ಟ ಮಾತನ್ನೂ ಉಳಿಸಿಕೊಳ್ಳುವ ಬದ್ಧತೆ ಈ ಸರ್ಕಾರಕ್ಕಿಲ್ಲವೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದರೆ.
ಉಚಿತ ವಿದ್ಯುತ್ಗಾಗಿ ಎಸ್ ಸಿ/ಎಸ್ ಟಿ ಸಮುದಾಯದವರು ಈ ಸರ್ಕಾರಕ್ಕೇನು ಅರ್ಜಿಯೂ ಹಾಕಿರಲಿಲ್ಲ, ಭಿಕ್ಷೆಯೂ ಬೇಡಿರಲಿಲ್ಲ. ಸ್ವತಃ ಸರ್ಕಾರವೇ 75 ಯುನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ, ಈಗ ಸದ್ದೇ ಇಲ್ಲದೆ ವಾಪಾಸ್ ಪಡೆದಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ರಾಜಧರ್ಮ. ಈ ಬೊಮ್ಮಾಯಿ ಸರ್ಕಾರಕ್ಕೆ ತನ್ನ ಮಾತಿನ ಮೇಲೇ ನಿಲ್ಲುವ ಯೋಗ್ಯತೆಯಿಲ್ಲವೇ ಎಂದರು.
ಇದನ್ನೂ ಓದಿ:ಅಗ್ನಿ ದುರಂತದಲ್ಲಿ ನಾಲ್ವರ ಬಲಿ ಪಡೆದ ಲೆವನಾ ಹೋಟೆಲ್ ನೆಲಸಮಕ್ಕೆ ಮುಂದಾದ ಪಾಲಿಕೆ
1#BJP ಸರ್ಕಾರ ಕೇವಲ 15 ದಿನದ ಹಿಂದಷ್ಟೇ SC/ST ಸಮುದಾಯದ BPL ಕಾರ್ಡ್ದಾರರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ ಈಗ ಏಕಾಏಕಿ ಹಿಂಪಡೆದಿದೆ.@BSBommai ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ನಾಟಕ ಯಾಕೆ ಆಡಬೇಕು?
ಕೊಟ್ಟ ಮಾತನ್ನೂ ಉಳಿಸಿಕೊಳ್ಳುವ ಬದ್ಧತೆ ಈ ಸರ್ಕಾರಕ್ಕಿಲ್ಲವೆ? pic.twitter.com/L9HAw3wcOB
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 6, 2022
ರದ್ದು ಮಾಡಿಲ್ಲ: ಸಚಿವ ಸುನಿಲ್
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಇಂದನ ಇಲಾಖೆ ವತಿಯಿಂದ ಅನುಷ್ಠಾನಗೊಂಡ ಈ ಯೋಜನೆಯಡಿ ಫಲಾನುಭವಿಗಳಿಗೆ ತಿಂಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಯೋಜನೆಯನ್ನು ರದ್ದು ಪಡಿಸಲಾಗಿದೆ ಎನ್ನುವ ಮಾಹಿತಿ ಎಲ್ಲ ಕಡೆಗಳಲ್ಲೂ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ ಎಂದರು.
ಯೋಜನೆಗೆ ಸಂಬಂಧಿಸಿ ವಿಧಿಸಿದ ಕೆಲವು ನಿಯಮಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಆಗಸ್ಟ್ 24ರಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾತ್ರ ಹಿಂಪಡೆಯಲಾಗಿದೆ. ನಿಯಮಾವಳಿಗಳನ್ನು ರದ್ದುಪಡಿಸಲಾಗಿದೆಯೇ ಹೊರತು ಯೋಜನೆಯನ್ನಲ್ಲ ಎಂದು ಸ್ಪಷ್ಟಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ