ಮುಂದಿನ ವಾರ ದಿನೇಶ್ ಗುಂಡೂರಾವ್ ಗೋವಾ ಭೇಟಿ : ಪಕ್ಷ ಸಂಘಟನೆ ಬಗ್ಗೆ ಸಭೆ
Team Udayavani, Jun 9, 2021, 5:19 PM IST
ಪಣಜಿ: ಗೋವಾ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 8 ತಿಂಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಕಾಂಗ್ರೇಸ್ ಪಕ್ಷ ತನ್ನ ವೇಗವನ್ನು ಹೆಚ್ಚಿಸಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಗೋವಾ ಕಾಂಗ್ರೇಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಮುಂದಿನ ವಾರ ಗೋವಾಕ್ಕೆ ಆಗಮಿಸಲಿದ್ದು ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಪರಿಶೀಲಿಸಲು ರಾಜ್ಯದ ಎಲ್ಲ 40 ವಿಧಾನಸಭಾ ಕ್ಷೇತ್ರಗಳ ಕಾಂಗ್ರೇಸ್ ಬ್ಲಾಕ್ ಸಮೀತಿಯೊಂದಿಗೆ ಸಭೆ ನಡೆಸಲಿದ್ದಾರೆ.
ಗೋವಾ ಕಾಂಗ್ರೇಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಗೋವಾ ರಾಜ್ಯ ಕಾಂಗ್ರೇಸ್ ಸಮನ್ವಯ ಸಮೀತಿಯೊಂದಿಗೆ ವರ್ಚುವಲ್ ಸಭೆ ನಡೆಸಿದರು. ಗೋವಾ ರಾಜ್ಯ ಕಾಂಗ್ರೇಸ್ ಅಧ್ಯಕ್ಷ ಗಿರೀಶ್ ಚೋಡಣಕರ್, ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಸಮನ್ವಯ ಸಮೀತಿಯ ಅಧ್ಯಕ್ಷ ರಮಾಕಾಂತ ಖಲಪ್, ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಸಮೀತಿ, ರಾಜ್ಯ ಮಟ್ಟದ ಪಕ್ಷ ಸಂಘಟನೆ ಪುನರುಜ್ಜೀವನಗೊಳಿಸಲಾಗುವುದು. ಪಕ್ಷದ ಎಲ್ಲ ಪದಾಧಿಕಾರಿಗಳ ಕಾರ್ಯಕ್ಷಮತೆ ಪರಿಶೀಲನೆ, ನಡೆಸಿ ಅಗತ್ಯ ಬದಲಾವಣೆ ಮಾಡಲಾಗುವುದು. ನಾವು ಗೋವಾದ 40 ಕ್ಷೇತ್ರಗಳತ್ತ ಗಮನಹರಿಸುತ್ತಿದ್ದೇವೆ. ರಾಜ್ಯದ ಜನರ ನಂಬಿಕೆ ಮತ್ತು ವಿಶ್ವಾಸ ಗೆಲ್ಲಲು ಶೃಮಿಸುತ್ತೇವೆ ಎಂದು ಈ ಸಭೆಯಲ್ಲಿ ದಿನೇಶ್ ಗುಂಡೂರಾವ್ ಹೇಳಿದರು.
ಅಖಿಲ ಭಾರತ ಕಾಂಗ್ರೇಸ್ ಸಮೀತಿಯ ನಿರ್ದೇಶನದಂತೆ ಜೂನ್ 11 ರಂದು ಗೋವಾ ಕಾಂಗ್ರೇಸ್ ಸಮೀತಿಯು ಇಂಧನ ಬೆಲೆ ಏರಿಕೆ ವಿರುದ್ಧ ಅಖಿಲ ಭಾರತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದೆ. ಗೋವಾದ ಪ್ರತಿ ಕಾಂಗ್ರೇಸ್ ಬ್ಲಾಕ್ ಸಮೀತಿ ತಮ್ಮ ಕ್ಷೇತ್ರದಲ್ಲಿನ ಪೆಟ್ರೋಲ್ ಬಂಕ್ ಬಳಿ ಪ್ರತಿಭಟನೆ ನಡೆಸಲಿದೆ ಎಂದು ಕಾಂಗ್ರೇಸ್ ಸಮೀತಿ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ