ಭಗವಂತ ಖೂಬಾ ಹೇಳಿಕೆಗೆ ದಿನೇಶ್ ಗುಂಡೂರಾವ್ ಆಕ್ರೋಶ
Team Udayavani, Oct 28, 2021, 6:36 AM IST
ಬೆಂಗಳೂರು: ಬೆಲೆ ಏರಿಕೆ ಎಲ್ಲಿದೆ ಎಂದಿರುವ ಸಚಿವ ಭಗವಂತ ಖೂಬಾ ಯಾವ ಗ್ರಹದಲ್ಲಿದ್ದಾರೆ. ಜನ ಬೆಲೆ ಏರಿಕೆಯ ವಿರುದ್ಧ ಬೀದಿಗಿಳಿದಿರುವುದು ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಬೆಲೆ ಏರಿಕೆಯ ವಿರುದ್ಧ ಜನ ಅಸಹನೆ ಆಕ್ರೋಶದ ರೂಪ ಪಡೆಯುತ್ತಿದೆ. ಇಷ್ಟಾದರೂ ಅದ್ಯಾವ ಭಂಡತನದಿಂದ ಬೆಲೆ ಏರಿಕೆ ಆಗಿಲ್ಲ ಎಂದು ಹೇಳುತ್ತೀರಿ ಎಂದಿದ್ದಾರೆ.
80 ರೂ. ಇದ್ದ ಅಡುಗೆ ಎಣ್ಣೆ 180 ರೂ. ಆಗಿದೆ. 75 ರೂ. ಇದ್ದ ಪೆಟ್ರೋಲ್ 113 ರೂ .ಆಗಿದೆ. 60 ರೂ. ಇದ್ದ ಡೀಸೆಲ್ 103 ರೂ. ಆಗಿದೆ. 500 ರೂ. ಇದ್ದ ಅಡುಗೆ ಅನಿಲ ಸಿಲಿಂಡರ್ 910 ರೂ. ಆಗಿದೆ. ಇದು ಬೆಲೆ ಏರಿಕೆ ಅಲ್ಲವೇ ಖೂಬಾ ಅವರೇ ಎಂದು ಕೇಳಿದ್ದಾರೆ.
ಇದನ್ನೂ ಓದಿ:ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ : ಶಾಸಕ ಕೆ.ರಘುಪತಿ ಭಟ್ ಸಲಹೆ
ನೀವು ಸಚಿವರು, ಇದು ನಿಮಗೆ ದುಬಾರಿ ಎನಿಸದಿರಬಹುದು. ಆದರೆ, ಜನಸಾಮಾನ್ಯರ ಪಾಡೇನು, ಅವರೇನು ನಿಮ್ಮಷ್ಟು ಸಿರಿವಂತಿಕೆಯ ಕುಳಗಳೇ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ