ಪರಮೇಶ್ವರ್ಗೆ ಚೀಟಿ ಕಳಿಸಿ ಪೇಚಿಗೆ ಸಿಲುಕಿದ ದಿನೇಶ್
Team Udayavani, Jan 19, 2019, 1:25 AM IST
ಬೆಂಗಳೂರು: ಎಚ್.ಕೆ.ಪಾಟೀಲ್ ಪದಗ್ರಹಣ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭಾಷಣ ಮಾಡುವ ಸಂದರ್ಭದಲ್ಲಿ ಬೇಗ ಭಾಷಣ ಮಕ್ತಾಯಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚೀಟಿ ಕಳಿಸಿ, ಪೇಚಿಗೆ ಸಿಲುಕಿದ ಪ್ರಸಂಗ ನಡೆಯಿತು.
ಬೆಳಗ್ಗೆ 11ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ 1 ಗಂಟೆಗೆ ಆರಂಭವಾಯಿತು. ಎಲ್ಲ ನಾಯಕರು ಮಾತನಾಡುವ ಹೊತ್ತಿಗೆ ವಿಳಂಬವಾಗಿತ್ತು. ಉಪ ಮುಖ್ಯಮಂತ್ರಿ ಪರಮೇಶ್ವರ್ ಮಾತು ಆರಂಭಿಸಿದಾಗ ಮಧ್ಯಾಹ್ನ 2.30 ಗಂಟೆಯಾಗಿತ್ತು. ಮೂರು ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಅಲ್ಲದೇ ಅವರ ಭಾಷಣದ ನಂತರ ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಅವರೂ ಭಾಷಣ ಮಾಡುವುದಿತ್ತು. ಹೀಗಾಗಿ, ಪರಮೇಶ್ವರ್ಗೆ ಬೇಗ ಭಾಷಣ ಮುಗಿಸುವಂತೆ ದಿನೇಶ್ ಗುಂಡೂರಾವ್ ಚೀಟಿ ಕಳುಹಿಸಿದರು. ಇದಕ್ಕೆ ಕೋಪಗೊಂಡ ಪರಮೇಶ್ವರ್, ನನಗ್ಯಾಕಪ್ಪಾ ಚೀಟಿ ಕೊಡ್ತೀರಾ ಎಂದು ಸಿಟ್ಟಿನಿಂದಲೇ ಚೀಟಿಯನ್ನು ಹರಿದು ಹಾಕಿ ಭಾಷಣ ಮುಂದು ವರೆಸಿದರು.
ಭಾಷಣ ಮುಗಿದ ತಕ್ಷಣ ಸಭೆಯಿಂದಲೂ ಹೊರಟು ಹೋದರು. ಪರಮೇಶ್ವರ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಈಶ್ವರ್ ಖಂಡ್ರೆ ಅವರನ್ನು ಮಧ್ಯ ಕೂಡಿಸಿಕೊಂಡು ಮಾತನಾಡುತ್ತಿದ್ದರು. ಇದರಿಂದ ಇರಿಸು ಮುರಿಸಾದ ದಿನೇಶ್, ಪರಮೇಶ್ವರ್ ಅವರು ಬೇಗ ಭಾಷಣ ಮುಗಿಸಿದರೆ, ನಂತರ ಈಶ್ವರ್ ಖಂಡ್ರೆ ಭಾಷಣ ಮಾಡಲು ಎದ್ದು ಹೋಗುತ್ತಾರೆ ಎನ್ನುವ ಕಾರಣಕ್ಕೆ ಚೀಟಿ ನೀಡಿದ್ದರು ಎಂದು ತಿಳಿದು ಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ