ಭಾವೈಕ್ಯತೆ ವಿರೋಧಿ ಸ್ವಾಮೀಜಿ ಹೆಸರಲ್ಲಿ ಭಾವೈಕ್ಯತೆ ದಿನ: ದಿಂಗಾಲೇಶ್ವರಶ್ರೀ ಆಕ್ಷೇಪ


Team Udayavani, Apr 19, 2022, 6:11 PM IST

Untitled-1

ಶಿರಹಟ್ಟಿ(ಗದಗ): ವೀರಶೈವ- ಲಿಂಗಾಯತ ಒಂದೇ ಅಲ್ಲ ಎಂಬ ವಿವಾದವನ್ನು ಸೃಷ್ಟಿಮಾಡಿ, ಇಡೀ ಸಮಾಜ ಹೊತ್ತಿ ಉರಿಸುವಂತೆ ಮಾಡಿದ್ದು, ಆರ್‌ಎಸ್‌ಎಸ್, ಬಿಜೆಪಿಯನ್ನು ವಿರೋಧಿಸಿದ್ದರು ನೆನಪಿಲ್ಲವೇ. ಅಂತಹ ಸ್ವಾಮೀಜಿ ಜನ್ಮದಿನಾಚರಣೆಯನ್ನ ಭಾವೈಕ್ಯತಾ ದಿನಾಚರಣೆಯನ್ನಾಗಿ ಘೊಷಿಸಲು ಕಾರಣವೇನು ಎಂಬುದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಶಿರಹಟ್ಟಿ ಫಕ್ಕೀರಸ್ವಾಮಿ ಮಠದ ದಿಂಗಾಲೇಶ್ವರ ಶ್ರೀಗಳು ಆಗ್ರಹಿಸಿದರು.

ಶಿರಹಟ್ಟಿ ಫಕ್ಕೀರಸ್ವಾಮಿಗಳ ಮಠದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಂಟದ ಸಿದ್ಧಲಿಂಗ ಸ್ವಾಮಿಗಳ ಸ್ಮರಣಾರ್ಥ ನೂರು ಪ್ರಶಸ್ತಿಗಳನ್ನು ನೀಡಲಿ. ವರ್ಷದ 365 ದಿನಗಳಲ್ಲಿ 364 ದಿನಗಳನ್ನು ಅವರ ಸಾಧನೆಯನ್ನು ಸಾರಲು ಮೀಸಲಿಡಲಿ ನಮ್ಮ ಅಭ್ಯಂತರವಿಲ್ಲ. ಆದರೆ, ಕಳೆದ 5 ಶತಮಾನಗಳಿಂದ ಭಾವೈಕ್ಯತೆಗೆ ಶ್ರಮಿಸುತ್ತಿರುವ ಶಿರಹಟ್ಟಿಯ ಫಕ್ಕೀರಸ್ವಾಮಿ ಮಠವನ್ನು ಕಡೆಗಣಿಸಲಾಗಿದೆ. ರಾಜಕಾರಣಿಗಳಲ್ಲಿ ಅಧ್ಯಯನದ ಕೊರತೆಯಿಂದಾಗಿ ಇಂತಹ ಅಚಾತುರ್ಯಗಳು ನಡೆಯುತ್ತವೆ ಎಂದು ಸಚಿವ ಸಿ.ಸಿ.ಪಾಟೀಲ ಅವರನ್ನು ತರಾಟೆಗೆ ತೆಗೆದುಕೊಂಡರು.

ಸರಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದಾಖಲೆ ನೀಡಲಿ ಎಂಬ ಸಚಿವ ಭೈರತಿ ಬಸವರಾಜ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀಗಳು, ಲಂಚ ಎಂಬುದು ಗುಪ್ತವಾಗಿ ನಡೆಯುವ ವ್ಯವಹಾರವೇ ಹೊರತು, ಬಹಿರಂಗ ವ್ಯವಹಾರವಲ್ಲ. ಮಠ ಮಾನ್ಯಗಳಿಗೆ ದೇಣಿಗೆ ನೀಡುವ ಭಕ್ತರಿಗೆ ನೀಡುವಂತೆ ಅಧಿಕಾರಿಗಳು ಪಾವತಿ ನೀಡುವುದಿಲ್ಲ. ಲಂಚಗುಳಿತನಕ್ಕೆ ದಾಖಲೆ ಕೇಳುವವರ ಜನ್ಮಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.

ನಿರ್ಮಿತಿ ಕೇಂದ್ರದ ವಿರುದ್ಧ ಆರೋಪ:

ಶಿರಹಟ್ಟ ಫಕ್ಕೀರಸ್ವಾಮಿಗಳ ಮಠಕ್ಕೆ 75 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಅದರಲ್ಲಿ 25 ಲಕ್ಷ ರೂ. ಗಳನ್ನು ಕಡಿತ ಮಾಡಿಕೊಂಡು ಬಿಡುಗಡೆ ಮಾಡುವುದಾಗಿ ಗದಗ ಮತ್ತು ಶಿರಹಟ್ಟಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಠಕ್ಕೆ ಬಿದ್ದಿದ್ದಾರೆ. ಆದರೆ, ಅಧಿಕಾರಿಗಳ ಒತ್ತಡಕ್ಕೆ ನಾವು ಮಣಿದಿಲ್ಲ. ಅನುದಾನ ಇನ್ನೂ ಬಿಡುಗಡೆ ಮಾಡಿಯಾಗಿಲ್ಲ. ಸರಕಾರ ತೆರಿಗೆ ರೂಪದಲ್ಲಿ ಅದನ್ನು ಕಡಿತ ಮಾಡಿಕೊಂಡರೆ, ನಮ್ಮ ಅಭ್ಯಂತರವಿಲ್ಲ. ಆದರೆ, ಭ್ರಷ್ಟಾಚಾರ ನಡೆಯುತ್ತಿದ್ದರೆ, ಅದನ್ನು ತಡೆದು ಸರಕಾರ ಘೋಷಿಸಿರುವ 75 ಲಕ್ಷ ರೂ.ಗಳನ್ನೂ ಬಿಡುಗಡೆಗೊಳಿಸಲಿ ಎಂದು ಸವಾಲು ಹಾಕಿದರು.

ಯಾವುದೇ ಆಸೆ, ಆಮಿಷಕ್ಕೆ ಒಳಗಾಗಿ ಸರಕಾರದ ವಿರುದ್ಧ ಆರೋಪ ಮಾಡುತ್ತಿಲ್ಲ. ಹಾಗಾದರೆ, ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸುವಾಗ ನೂರಾರು ಸ್ವಾಮೀಜಿಗಳೊಂದಿಗೆ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದೆವು. ಆಗ ಯಾರು, ಯಾವ ಆಮಿಷವನ್ನೊಡ್ಡಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದ ಅವರು, ರಾಜ್ಯದ ಹಿತಕ್ಕಾಗಿ ಸ್ವಾಮಿಗಳು ಎಚ್ಚರಿಸುವ, ಸೂಚಿಸುವ ಕೆಲಸವನ್ನು ಮಾಡುತ್ತಾರೆ. ಅದನ್ನೇ ನಾನು ಮಾಡುತ್ತಿದ್ದೇನೆ ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.