ಭದ್ರತೆ ಹೆಚ್ಚಿಸಲು ಕೇಂದ್ರದಿಂದ ಸೂಚನೆ: ವಿಧ್ವಂಸಕ ಕೃತ್ಯ ಸಂಚು?  


Team Udayavani, Mar 1, 2019, 12:56 AM IST

74.jpg

ಬೆಂಗಳೂರು: ಪುಲ್ವಾಮ ಘಟನೆ ಬಳಿಕ ರಾಜ್ಯದಲ್ಲೂ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿರುವ ಮಾಹಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನೀಡಿದ್ದು, ಪ್ರಮುಖ ನಗರ, ಅಣೆಕಟ್ಟೆಗಳು, ಅಣುಸ್ಥಾವರ ಸೇರಿ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಕೇಂದ್ರ ಕಚೇರಿಯಿಂದ ಎಲ್ಲಾ ಪೊಲೀಸ್‌ ಆಯುಕ್ತರಿಗೆ, ಜಿಲ್ಲಾ ಪೊಲೀಸ್‌ ವರಿಷ್ಠರಿಗೆ ಮತ್ತು ವಲಯಗಳ ಪೊಲೀಸ್‌ ಮಹಾ ನಿರೀಕ್ಷಕರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ದೂರದರ್ಶನ, ಆಕಾಶವಾಣಿ ಕೇಂದ್ರಗಳು, ಕೇಂದ್ರಸರ್ಕಾರಕ್ಕೆ ಸಂಬಂಧಿಸಿದ ಆಯಕಟ್ಟಿನ ಕಟ್ಟಡಗಳು, ಪ್ರದೇಶಗಳಿಗೆ ಹೆಚ್ಚಿನ ರಕ್ಷಣೆ ಒದಗಿಸಲೂ ಹೇಳಲಾಗಿದೆ.

ಕರಾವಳಿಯುದ್ದಕ್ಕೂ ಕರಾವಳಿ ರಕ್ಷಣಾ ಪಡೆ ಹೆಚ್ಚಿನ ನಿಗಾ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಿಗಿಗೊಳಿಸುವಂತೆ ತಿಳಿಸಲಾಗಿದೆ. ಸಾರ್ವಜನಿಕ ಬಸ್‌, ರೈಲು ನಿಲ್ದಾಣ, ವಿಮಾನ ನಿಲ್ದಾಣಗಳ ಸುತ್ತ ನಿಗಾ ವಹಿಸಲಾಗಿದೆ. ಶಂಕಿತ ವ್ಯಕ್ತಿ, ವಸ್ತುಗಳು ಕಂಡುಬಂದಲ್ಲಿ ಪೊಲೀಸ್‌ ನಿಯಂತ್ರಣ ಕೊಠಡಿ ಸಂಖ್ಯೆ -100ಗೆ ಕರೆ ಮಾಡಲು ವಿನಂತಿಸಲಾಗಿದೆ.

ಬಸ್‌ ನಿಲ್ದಾಣಗಳಲ್ಲಿ ಕಟ್ಟೆಚ್ಚರ
ಸಾರ್ವಜನಿಕ ಬಸ್‌ ನಿಲ್ದಾಣ, ಸಾರಿಗೆ ಬಸ್‌ಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕೆಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗೃತಾ ವಿಭಾಗ ತಿಳಿಸಿದೆ.

ಪ್ರಯಾಣಿಕರಿಗೆ ತಿಳಿವಳಿಕೆ
 ಬಸ್‌ ನಿಲ್ದಾಣಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು/ ಅವರು ತರುವ ಬ್ಯಾಗ್‌ಗಳ
ಬಗ್ಗೆ ಮಾಹಿತಿ ನೀಡುವಂತೆ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಮನವಿ.

 ಪೊಲೀಸ್‌, ಆಸ್ಪತ್ರೆ, ಅಗ್ನಿ ಶಾಮಕ ಠಾಣೆ, ಸಂಸ್ಥೆಯ ಕಂಟ್ರೋಲ್‌ ರೂಂನ ದೂರವಾಣಿ ಸಂಖ್ಯೆಯನ್ನು ಬಸ್‌ ನಿಲ್ದಾಣ ಮುಂಭಾಗದಲ್ಲಿ ಪ್ರಕಟಿಸಲಾಗುವುದು.

 ಸಂಸ್ಥೆಯ ಎಲ್ಲ ವರ್ಗದ ಸಿಬ್ಬಂದಿಗೆ ಭಯೋತ್ಪಾದಕರ ಕೃತ್ಯದ ಬಗ್ಗೆ ಎಚ್ಚರ ವಹಿಸುವಂತೆ ತಿಳಿವಳಿಕೆ.

 ತುರ್ತು ಪರಿಸ್ಥಿತಿಯಲ್ಲಿ ಗಾಯಾಳುಗಳನ್ನು ಸಾಗಿಸುವ ಬಗ್ಗೆ ಹಾಗೂ ಅಗ್ನಿ ಶಾಮಕ ಉಪಕರಣಗಳ ಉಪಯೋಗಿಸುವ ಬಗ್ಗೆ ಭದ್ರತಾ, ನಿಲ್ದಾಣದ ಸಿಬ್ಬಂದಿಗೆ ಅಣುಕು ಪ್ರದರ್ಶನ ನೀಡಲಾಗುವುದು.

 ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದಿಂದ ನಿಲ್ದಾಣದಲ್ಲಿ ನಿರುಪಯುಕ್ತ ವಸ್ತುಗಳು, ವಿಶ್ರಾಂತಿ ಗೃಹಗಳು, ಶೌಚಾಲಯ ಸೇರಿ ಎಲ್ಲೆಡೆ ತಪಾಸಣೆ

ಬಸ್‌ ನಿಲ್ದಾಣಗಳಿಗೆ ಪ್ರತಿ ನಿತ್ಯ ಸ್ಥಳೀಯ ಪೊಲೀಸರು ಮೂರು ಬಾರಿ ಗಸ್ತು ತಿರುಗುವ ವ್ಯವಸ್ಥೆ.

ಬಸ್‌ ನಿಲ್ದಾಣಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಹಾಗೂ ಡಿವಿಆರ್‌ಗಳ ಕಾರ್ಯಕ್ಷಮತೆ ಬಗ್ಗೆ ಖಾತರಿಪಡಿಸಿಕೊಳ್ಳುವುದು.ಪ್ರಯಾಣಿಕರಿಗೆ ತಿಳಿವಳಿಕೆ

ಬಸ್‌ ನಿಲ್ದಾಣಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು/ ಅವರು ತರುವ ಬ್ಯಾಗ್‌ಗಳ
ಬಗ್ಗೆ ಮಾಹಿತಿ ನೀಡುವಂತೆ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಮನವಿ.

ಪೊಲೀಸ್‌, ಆಸ್ಪತ್ರೆ, ಅಗ್ನಿ ಶಾಮಕ ಠಾಣೆ, ಸಂಸ್ಥೆಯಕಂಟ್ರೋಲ್‌ ರೂಂನ ದೂರವಾಣಿ ಸಂಖ್ಯೆಯನ್ನು ಬಸ್‌ ನಿಲ್ದಾಣ ಮುಂಭಾಗದಲ್ಲಿ ಪ್ರಕಟಿಸಲಾಗುವುದು.

 ಸಂಸ್ಥೆಯ ಎಲ್ಲ ವರ್ಗದ ಸಿಬ್ಬಂದಿಗೆ ಭಯೋತ್ಪಾದಕರ ಕೃತ್ಯದ ಬಗ್ಗೆ ಎಚ್ಚರ ವಹಿಸುವಂತೆ ತಿಳಿವಳಿಕೆ.

 ತುರ್ತು ಪರಿಸ್ಥಿತಿಯಲ್ಲಿ ಗಾಯಾಳುಗಳನ್ನು ಸಾಗಿಸುವ ಬಗ್ಗೆ ಹಾಗೂ ಅಗ್ನಿ ಶಾಮಕ ಉಪಕರಣಗಳ ಉಪಯೋಗಿಸುವ ಬಗ್ಗೆ ಭದ್ರತಾ, ನಿಲ್ದಾಣದ ಸಿಬ್ಬಂದಿಗೆ ಅಣುಕು ಪ್ರದರ್ಶನ ನೀಡಲಾಗುವುದು.

ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದಿಂದ ನಿಲ್ದಾಣದಲ್ಲಿ ನಿರುಪಯುಕ್ತ ವಸ್ತುಗಳು, ವಿಶ್ರಾಂತಿ ಗೃಹಗಳು, ಶೌಚಾಲಯ ಸೇರಿ ಎಲ್ಲೆಡೆ ತಪಾಸಣೆ

 ಬಸ್‌ ನಿಲ್ದಾಣಗಳಿಗೆ ಪ್ರತಿ ನಿತ್ಯ ಸ್ಥಳೀಯ ಪೊಲೀಸರು ಮೂರು ಬಾರಿ ಗಸ್ತು ತಿರುಗುವ ವ್ಯವಸ್ಥೆ.

 ಬಸ್‌ ನಿಲ್ದಾಣಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಹಾಗೂ ಡಿವಿಆರ್‌ಗಳ ಕಾರ್ಯಕ್ಷಮತೆ ಬಗ್ಗೆ ಖಾತರಿಪಡಿಸಿಕೊಳ್ಳುವುದು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.