ವಿಧಾನಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಭಾಧ್ಯಕ್ಷರ ನಿರ್ದೇಶನ
Team Udayavani, Jul 7, 2021, 7:09 PM IST
ಬೆಂಗಳೂರು : ವಿಧಾನಸಭೆಯ ಅಧಿವೇಶನಕ್ಕೆ ಸಿದ್ಧತೆ ಆರಂಭಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದು ತಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.
ವಿಧಾನಸಭೆಯ ಅಧಿಕಾರಿಗಳನ್ನುದ್ದೇಶಿಸಿ ಅವರು, “ಅಧಿವೇಶನವನ್ನು ಯಾವಾಗ ಮತ್ತು ಎಲ್ಲಿ ನಡೆಸಬೇಕು ಎಂದು ನಿರ್ಧರಿಸುವುದು ಸರ್ಕಾರದ ಪರಮಾಧಿಕಾರವಾಗಿದೆ. ಆದರೆ, ನಾವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಮತ್ತು ಅಧಿವೇಶನ ಸುಗಮವಾಗಿ ನಡೆಯಲು ಸಜ್ಜಾಗಿದ್ದೇವೆ ಎಂಬುದನ್ನು ಸ್ವಯಂ ಖಾತ್ರಿ ಪಡಿಸಿಕೊಳ್ಳಬೇಕು ಎಂದರು.
ಕೋವಿಡ್ ನ ಪ್ರತ್ಯೇಕೀಕರಣ ಮತ್ತು ಲಾಕ್ ಡೌನ್ ಮನೋಸ್ಥಿತಿಯಿಂದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರಬರಬೇಕಾದ ಅಗತ್ಯ ಪ್ರತಿಪಾದಿಸಿದ ಅವರು, ವ್ಯಾಪಕವಾಗಿ ಕರ್ತವ್ಯ ನಿರ್ವಹಣೆ ಮಾಡುವುದರೊಂದಿಗೆ ಈವರೆಗೆ ಆಗಿರುವ ನಷ್ಟವನ್ನು ಸರಿದೂಗಿಸುವಂತೆ ಸಲಹೆ ಮಾಡಿದರು.
“ನಾವು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅಗತ್ಯವಿದೆದೆ ಮತ್ತು ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಕೆಲಸವನ್ನು ತ್ವರಿತ ವಿಧಾನದ ಮೂಲಕ ಪೂರ್ಣಗೊಳಿಸಬೇಕಾಗಿದೆ” ಎಂದ ಸ್ಪೀಕರ್, ನಾವಿನ್ಯತೆಯ ಬಗ್ಗೆ ಚಿಂತಿಸುವ ಮತ್ತು ತಂತ್ರಜ್ಞಾನದ ಬಳಕೆಯೊಂದಿಗೆ ಕರ್ನಾಟಕ ವಿಧಾನಸಭೆ ಮತ್ತು ಸಚಿವಾಲಯವನ್ನು ಮಾದರಿಯಾಗಿ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ