ಫಡ್ನವೀಸ್ ಜತೆ ಚರ್ಚಿಸಿ ನೀರು ತರುತ್ತೇನೆ: ಬಿಎಸ್ವೈ
Team Udayavani, Nov 24, 2019, 3:02 AM IST
ಬೆಳಗಾವಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ನೀರು ಬಿಡುಗಡೆ ಕುರಿತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನಾನೇ ಖುದ್ದಾಗಿ ಭೇಟಿಯಾಗಿ ನಾಲ್ಕು ಟಿಎಂಸಿ ಅಡಿ ನೀರು ಬಿಡುವಂತೆ ಕೋರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಕಾಗವಾಡ ಕ್ಷೇತ್ರದ ಶಿರಗುಪ್ಪಿ ಯಲ್ಲಿ ಶನಿವಾರ ನಡೆದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿ, ಈ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೆ ತರಲಾಗುವುದು. ಮಹಾರಾಷ್ಟ್ರದಲ್ಲಿ ನಮ್ಮದೇ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರಿಂದ ಮತ್ತಷ್ಟು ಅನುಕೂಲವಾಗಿದೆ ಎಂದರು.