ಕಲ್ಲಿದ್ದಲು ಕೊರತೆ ನಿವಾರಿಸಲು ಕೇಂದ್ರದ ಜೊತೆ ಚರ್ಚೆಯಾಗಿದೆ: ಸಿಎಂ ಬೊಮ್ಮಾಯಿ
Team Udayavani, Oct 10, 2021, 2:36 PM IST
ಬೆಂಗಳೂರು: ಕಲ್ಲಿದ್ದಲು ಕೊರತೆ ವಿಚಾರವನ್ನು ಕೇಂದ್ರದ ಜೊತೆ ಈಗಾಗಾಲೇ ಮಾತನಾಡಿದ್ದೇನೆ. ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಗೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗಂತಲೇ ಗಣಿ ನಿಗದಿಯಾಗಿದೆ. ಓರಿಸ್ಸಾದ ಮಾನಂದಿ, ಚಂದ್ರಾಪುರ ಫಾರೆಸ್ಟ್ ಎರಡು ಕಡೆ ಅಲಾಟ್ ಆಗಿದೆ. ಚಂದ್ರಾಪುರದಲ್ಲಿ ಪತ್ರ ದೊರಕಿದ ಬಳಿಕ ಮಾಡುತ್ತೇವೆಂದು ಹೇಳಿದ್ದಾರೆ. ಅದು ಇನ್ನೊಂದು ವಾರದಲ್ಲಿ ಆಗಲಿದೆ. ಮಹಾನಂದಿ ಗಣಿ ಬೇರೆಯವರಿಗಿದ್ದದ್ದು, ನಮಗೆ ಕೊಟ್ಟಿದ್ದಾರೆ. ಅದರ ಬಗ್ಗೆ ಈಗಾಗಲೇ ಪರಿಶೀಲಿಸಲಾಗಿದೆ. ಇವೆರಡು ಮೈನ್ಸ್ ನಮಗಾದರೆ ಸ್ವಲ್ಪ ಖರ್ಚು ಕಡಿಮೆಯಾಗಲಿದೆ. ಬೇರೆಯವರ ಮೇಲೆ ಅವಲಂಬನೆ ಆಗೋದು ಕಡಿಮೆಯಾಗಲಿದೆ ಎಂದರು.
ಕಾಂಗ್ರೆಸ್ ನಿಂದ ಯಡಿಯೂರಪ್ಪ ಕೆಳಗಿಳಿಸಿದ ಆರೋಪ ವಿಚಾರಕ್ಕೆ ಮಾತನಾಡಿದ ಅವರು, ಎಲ್ಲದರಲ್ಲೂ ರಾಜಕೀಯ ಮಾಡೋದು ಅವರ ಗುಣ. ಅವರ ಹೇಳಿಕೆ ನಮಗೆ ಮುಖ್ಯವಲ್ಲ ಎಂದರು.
ಇದನ್ನೂ ಓದಿ:ಕಾರಾಗೃಹದ 85 ಕೈದಿಗಳಿಗೆ ಎಚ್ಐವಿ ಪಾಸಿಟಿವ್ : ಸೋಂಕು ತಗುಲಿದ್ದು ಹೇಗೆ ?
ಬೆಂಗಳೂರು ಉಸ್ತುವಾರಿ ವಿಚಾರವಾಗಿ ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈಗಾಗಲೇ ಮಾತನಾಡಿದ್ದೇನೆ. ಬೆಂಗಳೂರು ಉಸ್ತುವಾರಿ ಸಂಬಂಧ ಶಾಸಕರ ಸಭೆ ಕರೆದಿಲ್ಲ ಎಂದು ಹೇಳಿದರು.
1-5ನೇ ತರಗತಿ ಶಾಲೆ ಆರಂಭ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಸರಾ ಬಳಿಕ ತಜ್ಞರ ಸಮಿತಿ ಜೊತೆ ಸಭೆ ಮಾಡುತ್ತೇನೆ. ಚರ್ಚೆ ಆದ ಬಳಿಕ ಏನು ಮಾಡಬೇಕೆಂದು ನಿರ್ಧಾರ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್