JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್ ಅಹಮದ್ ಖಾನ್
ಜೆಡಿಎಸ್ ತೊರೆಯುವ ನಾಯಕರನ್ನು ಬೃಹತ್ ಸಮಾವೇಶ ಮೂಲಕ ಸ್ವಾಗತಿಸಲಾಗುವುದು
Team Udayavani, Oct 2, 2023, 9:42 PM IST
ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಅತೃಪ್ತರಾಗಿರುವ ಮುಖಂಡರನ್ನು ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ಗೆ ಕರೆ ತರಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನಾಯಕರ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಮನಗರ, ಚನ್ನಪಟ್ಟಣ, ಹಾಸನ, ಮಂಡ್ಯ ಸಹಿತ ರಾಜ್ಯದ ಎಲ್ಲೆಡೆ ಅಲ್ಪಸಂಖ್ಯಾತರು ಹಾಗೂ ಸೇರಿ ಜಾತ್ಯತೀತ ಮನೋಭಾವವುಳ್ಳ ಮುಖಂಡರು ಜೆಡಿಎಸ್ನ ಮೈತ್ರಿ ನಡೆಯಿಂದ ಬೇಸರಗೊಂಡಿದ್ದಾರೆ. ಅಂತವರು ನಮ್ಮ ಸಂಪರ್ಕ ದಲ್ಲಿದ್ದಾರೆ. ಅವರೆಲ್ಲರನ್ನು ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಚಡ್ಡಿ ಹಾಕಿದ್ದು ಗೊತ್ತಿರಲಿಲ್ಲ: ದೇವೇಗೌಡರು ಈಗಲೂ ಜಾತ್ಯತೀತರು, ಆಗಲೂ ಜಾತ್ಯತೀತರು. ಅವರಿಂದ ನಮ್ಮ ಸಮಾಜಕ್ಕೆ ನ್ಯಾಯ ಸಿಕ್ಕಿದೆ, ಎರಡನೇ ಹಂತದ ನಾಯಕರನ್ನೂ ಬೆಳೆಸಿದ್ದಾರೆ. ಆದರೆ ಎಚ್.ಡಿ. ಕುಮಾರಸ್ವಾಮಿ ಜಾತ್ಯತೀತವಾದಿಯಲ್ಲ. ನಾನು ಕುಮಾರಸ್ವಾಮಿ ಅವರ ಎಲ್ಲ ವಿದ್ಯೆ ನೋಡಿದ್ದೆ . ಆದರೆ ಅವರು ಪ್ಯಾಂಟ್ ಒಳಗೆ ಆರ್ಎಸ್ಎಸ್ ಚಡ್ಡಿ ಹಾಕಿದ್ದು ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಗಿ ಹೇಳಿದರು.
ಚನ್ನಪಟ್ಟಣದ ಮಾಜಿ ಶಾಸಕ ಅಶ್ವತ್ಥ್, ಜಬಿ, ಜಿಯಾಜಿಲ್ಲಾಖಾನ್ ಸೇರಿದಂತೆ ಹಲವು ಮುಖಂಡರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು. ಈ ಸಂದರ್ಭದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಿ. ಕೆ. ಸುರೇಶ್ ಉಪಸ್ಥಿತರಿದ್ದರು.
ಜೆಡಿಎಸ್ -ಬಿಜೆಪಿ ಸರ್ಕಾರದಲ್ಲಿ ಕುಮಾರಸ್ವಾಮಿ ನನಗೆ ಕಾಟಾಚಾರಕ್ಕೆ ಸಚಿವ ಸ್ಥಾನ ನೀಡಿ ವಕ್ಫ್, ಹಜ್ ಖಾತೆ ಮಾತ್ರ ನೀಡಿದ್ದರು. ಕಾಂಗ್ರೆಸ್ ಸರ್ಕಾರದಲ್ಲಿ ನನಗೆ ಕಳೆದ ಬಾರಿ ನಾಲ್ಕು, ಈ ಬಾರಿ ಮೂರು ಪ್ರಬಲ ಖಾತೆ ನೀಡಿದ್ದಾರೆ. ಇದು ಕುಮಾರಸ್ವಾಮಿಗೂ ಕಾಂಗ್ರೆಸ್ಗೆ ಇರುವ ವ್ಯತಾಸ. ಬಿ.ಎಂ.ಫಾರೂಕ್ ಅವರು ಹೇಗೆ ಸಮರ್ಥಿಸಿಕೊಂಡು ಬಿಜೆಪಿ ಮೈತ್ರಿ ಒಪ್ಪುತ್ತಾರೆ?
-ಜಮೀರ್ ಅಹಮ್ಮದ್ ಖಾನ್, ಸಚಿವ
ಬಿ.ಎಂ ಫಾರೂಕ್ಗೆ ತಿರುಗೇಟು
ಬೆಂಗಳೂರು :ಜೆಡಿಎಸ್-ಬಿಜೆಪಿ ಸರ್ಕಾರದಲ್ಲಿ ಜಮೀರ್ ಅವರು ಸಚಿವರಾಗಿರಲಿಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಬಿ. ಎಂ. ಫಾರೂಕ್ ಅವರ ಹೇಳಿಕೆಗೆ ಪ್ರತಿಕ್ರಿಯಿದ ಅವರು, ಆಗ ಮೈತ್ರಿ ಆಗಿರಲಿಲ್ಲ, ಸಾಮಾನ್ಯ ಕನಿಷ್ಠ ಕಾರ್ಯಕ್ರಮದಡಿ ಸರ್ಕಾರ ರಚನೆ ಮಾಡಿದ್ದೆವು. ಮೈತ್ರಿ ಆಗಿದ್ದರೆ ನಾನು ಆಗಲೇ (2006) ಪಕ್ಷ ಬಿಡುತ್ತಿದ್ದೆ ಎಂದು ತಿಳಿಸಿದ್ದಾರೆ.
ಬಿ. ಎಂ. ಫಾರೂಕ್ ಅವರ ಬಗ್ಗೆ ಇದೀಗ ಪ್ರೀತಿ ತೋರುವ ಕುಮಾರಸ್ವಾಮಿ ಅವರು 2018 ರಲ್ಲಿ ಕಾಂಗ್ರೆಸ್ ಜತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡಿದಾಗ ಜೆಡಿಎಸ್ ನಿಂದ ಯಾಕೆ ಸಚಿವ ಸ್ಥಾನ ನೀಡಲಿಲ್ಲ. ಮುಸ್ಲಿಂ ಮೀಸಲಾತಿ ರದ್ದು, ಹಿಜಾಬ್, ಅಜಾನ್, ಹಲಾಲ್ ಮುಂತಾದ ವಿಚಾರಗಳಲ್ಲಿ ಬಿಜೆಪಿಯು ಮುಸ್ಲಿಂ ಸಮುದಾಯದ ಬಗ್ಗೆ ಹೇಗೆ ನಡೆದು ಕೊಂಡಿತು ಎಂಬುದು ಗೊತ್ತಿದೆ. ಇದನ್ನು ಫಾರೂಕ್ ಹೇಗೆ ಸಮರ್ಥಿಸಿಕೊಂಡು ಬಿಜೆಪಿ ಮೈತ್ರಿ ಒಪ್ಪುತ್ತಾರೆ. ಸಮುದಾಯ ಎಲ್ಲವನ್ನೂ ಗಮನಿಸುತ್ತಿದೆ ಎಂದು ಜಮೀರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
Charmadi ಘಾಟ್ನಲ್ಲಿ ಟಾಟಾ ಏಸ್ ಪಲ್ಟಿ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?