ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ: ಸಿದ್ದರಾಮಯ್ಯ ಆಗ್ರಹ
Team Udayavani, Apr 1, 2021, 11:39 AM IST
ಬೆಂಗಳೂರು: ಮುಖ್ಯಮಂತ್ರಿಗಳ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯ ಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು ಎಂದಿದ್ದಾರೆ.
ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ:ಇಪಿಎಫ್ ಗೂ ತೆರಿಗೆ, ಪಿಂಚಣಿ ನಿಧಿ ಶುಲ್ಕ ಹೆಚ್ಚಳ…ಇಂದಿನಿಂದ ಏನೇನು ಬದಲಾವಣೆ?
ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ಮೋದಿ ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರ ತನ್ನ ಸಂಶೋಧನೆ ಮೂಲಕ ಬಹಿರಂಗಗೊಳಿಸಿದ್ದಾರೆ. ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” ಎಂದು ಬದಲಿಸಿ ಬಿಡಿ ಎಂದು ಟೀಕಿಸಿದ್ದಾರೆ.
ಆಪರೇಷನ್ ಕಮಲ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರಸ್ವರೂಪದ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…