ಸಚಿವ ಸ್ಥಾನ ಆಕಾಂಕ್ಷಿಗಳ ತೀವ್ರ ಅಸಮಾಧಾನ ;ಬೆಂಬಲಿಗರ ಆತ್ಮಹತ್ಯೆ ಯತ್ನ
Team Udayavani, Dec 22, 2018, 2:17 PM IST
ಬೆಂಗಳೂರು: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗುವುದಿಲ್ಲ ಎನ್ನುವುದು ಖಾತ್ರಿಯಾದ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಲವು ಶಾಸಕರು ಬಹಿರಂಗ ಅಸಮಾಧಾನ ಹೊರ ಹಾಕಿದ್ದು , ಇನ್ನೊಂದೆಡೆ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮಾ ಮಾಡಿದ್ದಾರೆ.
ಹಿರೇಕೆರೂರಿನ ಮೂರು ಬಾರಿಯ ಶಾಸಕ ಬಿ.ಸಿ.ಪಾಟೀಲ್, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ,ಶಾಮನೂರು ಶಿವಶಂಕರಪ್ಪ,ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್, ಮೊದಲಾದವರು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ.
ಜಾತಿವಾರು ಲೆಕ್ಕಾಚಾರದಲ್ಲಿ ಪ್ರಾಂತ್ಯವಾರು ಲೆಕ್ಕಾಚಾರದಲ್ಲಿ ಹಾವೇರಿ ಜಿಲ್ಲೆ ಲೆಕ್ಕಕ್ಕೇ ಇಲ್ಲದಂತಾಗಿದೆ ಎಂದು ಬಿ.ಸಿ.ಪಾಟೀಲ್ ಕಿಡಿ ಕಾರಿದ್ದಾರೆ. ಸಾದರ ಲಿಂಗಾಯತ ವರ್ಗಕ್ಕೆ ಸೇರಿದ ನನ್ನನ್ನು ಕಡೆಗಣಿಸಲಾಗಿದೆ. ಇದೇ ಮೊದಲ ಬಾರಿಗೆ ಸಾದರ ಲಿಂಗಾಯತದವರನ್ನು ಕಡೆಗಣಿಸಲಾಗಿದೆ ಎಂದಿದ್ದಾರೆ.
ಎಚ್.ಕೆ.ಪಾಟೀಲ್ ಗೆ ಪ್ರಚಾರ ಸಮಿತಿ
ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಹಿರಿಯ ಶಾಸಕ ಎಚ್.ಕೆ .ಪಾಟೀಲ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಹಿಂದೆ ಸಚಿವ ಡಿ.ಕೆ.ಶಿವಕುಮಾರ್ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಾರೆ.
ಹೈಡ್ರಾಮಾ!
ಜೇವರ್ಗಿ ಶಾಸಕ ಅಜಯ್ಸಿಂಗ್ ಅವರ ಬೆಂಬಲಿಗ ಜಿಲಾನಿ ಎನ್ನುವ ಯುವಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಸ್ಥಳದಲ್ಲಿದ್ದವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಿ.ಸಿ.ಪಾಟೀಲ್ ಬೆಂಬಲಿಗನೆಂದು ಹೇಳಿಕೊಂಡು ಪುಟ್ಟೇಶ ಗೊರವರ ಎನ್ನುವ ಯುವಕ ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಆತನನ್ನು ಸ್ಥಳದಲ್ಲಿದ್ದವರು ಮನವೊಲಿಸಿ ಕೆಳಗಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್