ಕೆಪಿಜೆಪಿ ಭಿನ್ನಮತ ಸ್ಫೋಟ; ನಟ ಉಪೇಂದ್ರ ಹೇಳೋದೇನು?
Team Udayavani, Mar 5, 2018, 6:12 PM IST
ಬೆಂಗಳೂರು: ಕೆಪಿಜೆಪಿ ಕುರಿತು ನಾನು ಯಾವುದೇ ವಿಷಯವನ್ನು ಕದ್ದು ಮುಚ್ಚಿ ಮಾತನಾಡಿಲ್ಲ. ಆದರೆ ಯಾವ ಕಾರಣಕ್ಕೆ ಭಿನ್ನಮತ ಎಂದು ನನಗೂ ಗೊತ್ತಾಗುತ್ತಿಲ್ಲ. ನಾಳೆಯೇ (ಮಂಗಳವಾರ) ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ನಟ, ಕೆಪಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಉಪೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಕೆಪಿಜೆಪಿ ಪಕ್ಷದಲ್ಲಿನ ಭಿನ್ನಮತಕ್ಕೆ(ಇದನ್ನೂ ಓದಿ: ಪ್ರಜಾಕೀಯದಲ್ಲಿ ಅಪಸ್ವರ; ಕೆಪಿಜೆಪಿಯಿಂದ ನಟ ಉಪೇಂದ್ರಗೆ ಗೇಟ್ ಪಾಸ್?) ಸಂಬಂಧಿಸಿದಂತೆ ಕತ್ರಿಗುಪ್ಪೆಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಾವೊಂದು ನಿಯಮಗಳನ್ನು ಪಾಲಿಸುತ್ತಿದ್ದೇವು. ಅದರಂತೆ ತುಂಬಾ ಜನ ಯುವಕರು ಸಂದರ್ಶನಕ್ಕೂ ಬಂದಿದ್ದರು. ಬಳಿಕ ಮಹೇಶ್ ಕೂಡಾ ತಾವೂ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದರು. ಆಯ್ತು ಕರೆದುಕೊಂಡು ಬನ್ನಿ ಸಾರ್ ಎಂದಿದ್ದೆ.
ಆದರೆ ನಾನು ಆಯ್ಕೆ ಮಾಡಿದ್ದ ಅಭ್ಯರ್ಥಿಗಳಿಂದ 20 ಸ್ಥಾನವೂ ಗೆಲ್ಲಲ್ಲ ಎಂದು ಲಘುವಾಗಿ ಮಾತನಾಡಿದ್ದರು. ಈ ವಿಚಾರವನ್ನು ಪಕ್ಷದ ಒಳಗೆ ಇತ್ಯರ್ಥಪಡಿಸಲು ಯತ್ನಿಸಿದ್ದೆ ಎಂದರು.
ಇಂದು ಮಹೇಶ್ ಗೌಡ ಅವರು ಮಾಧ್ಯಮದ ಮುಂದೆ ಬಂದು ನಾನು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದೇನೆ, ಸೈನಿಂಗ್ ಅಥಾರಿಟಿ ಕೇಳುತ್ತಿದ್ದಾರೆ ಎಂದೆಲ್ಲ ಆರೋಪಿಸುತ್ತಿದ್ದರು. ಅದಕ್ಕೆ ಸ್ಪಷ್ಟನೆ ಕೊಡಲು ಬಂದಿದ್ದೇನೆ ಎಂದರು.
ನಾನು ಪ್ರಜಾಕೀಯ ಆರಂಭಿಸುವ ಮೊದಲೇ ಹೇಳಿದ್ದೆ, ನಾನು ನಾಯಕರನ್ನ ಕೊಡಲ್ಲ, ನಮಗೆ ಸೇವಕರು ಬೇಡ..ನಾನು ಕಾರ್ಮಿಕರನ್ನು ಕೊಡುತ್ತೇನೆ ಎಂದಿದ್ದೆ. ಗೊಂದಲ ತಲೆದೋರಿದಾಗ ಸೈನಿಂಗ್ ಅಥಾರಿಟಿ ಕೇಳಿದ್ದೆ.ಆದರೆ ಅವರು ಯಾವುದಕ್ಕೂ ಒಪ್ಪಲಿಲ್ಲ. ಇದರ ಬಗ್ಗೆ ಹೆಚ್ಚೇನೂ ಹೇಳಲ್ಲ, ನಾಳೆ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್