ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ
Team Udayavani, Apr 9, 2020, 2:24 PM IST
ಬೆಂಗಳೂರು: ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾದ ನಂತರ ನೂತನ ಸಚಿವರುಗಳಿಗೆ ಜಿಲ್ಲಾ ಉಸ್ತವಾರಿ ಜವಾಬ್ದಾರಿ ನೀಡಲಾಗಿಲ್ಲ. ಹೀಗಾಗಿ ಇಂದು ಸಂಜೆಯೊಳಗೆ ಉಳಿದ ಸಚಿವರುಗಳಿಗೆ ಜಿಲ್ಲಾ ಉಸ್ತವಾರಿ ಜವಾಬ್ದಾರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಕೆಲವು ಸಚಿವರು ಎರಡು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದ್ದುಇದರಿಂದ ಸರಿಯಾಗಿ ಕೆಲಸ ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲು ಸುಲಭವಾಗುವಂತೆ ಎಲ್ಲಾ ಸಚಿವರುಗಳಿಗೆ ಉಸ್ತುವಾರಿ ಜವಾಬ್ದಾರಿ ನೀಡಬೇಕೆಂದು ಕೂಗು ಕೇಳಿ ಬಂದಿತ್ತು.
ಹೀಗಾಗಿ ಇಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು. ಹಾಲಿ ಜಿಲ್ಲಾ ಉಸ್ತುವಾರಿಗಳ ಹೊಣೆಯನ್ನು ಮರು ಹಂಚಿಕೆ ಸಾಧ್ಯತೆಯಿದೆ. ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ರಾಮನಗರಕ್ಕೆ ಎಸ್.ಟಿ.ಸೋಮಶೇಖರ್, ಚಿಕ್ಕಬಳ್ಳಾಪುರಕ್ಕೆ ಸುಧಾಕರ್, ಬಿ.ಸಿ.ಪಾಟೀಲ್ ಅವರಿಗೆ ಹಾವೇರಿ, ಬಳ್ಳಾರಿ ಜಿಲ್ಲೆಯ ಉಸ್ತುವಾರಿಗೆ ಆನಂದ್ ಸಿಂಗ್ ನೇಮಕ ಸಾಧ್ಯತೆಯಿದೆ ಎನ್ನಲಾಗಿದೆ.
ಸದ್ಯ ಇರುವ ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಅವರ ಜಿಲ್ಲೆಗಳು
ಬೆಂಗಳೂರು ನಗರ -ಬಿ ಎಸ್ ಯಡಿಯೂರಪ್ಪ
ಜಗದೀಶ್ ಶೆಟ್ಟರ್-ಬೆಳಗಾವಿ, ಧಾರವಾಡ
ನಾಗೇಶ್ – ಕೋಲಾರ
ಸುರೇಶ್ ಕುಮಾರ್ – ಚಾಮರಾಜನಗರ
ಶ್ರೀರಾಮುಲು – ಚಿತ್ರದುರ್ಗ, ರಾಯಚೂರು
ಸಿ.ಟಿ.ರವಿ – ಚಿಕ್ಕಮಗಳೂರು
ಅಶ್ವತ್ ನಾರಾಯಣ – ರಾಮನಗರ ಮತ್ತು ಚಿಕ್ಕಬಳ್ಳಾಪುರ
ಬಸವರಾಜ ಬೊಮ್ಮಾಯಿ – ಉಡುಪಿ ಮತ್ತು ಹಾವೇರಿ
ವಿ.ಸೋಮಣ್ಣ – ಮೈಸೂರು ಮತ್ತು ಕೊಡಗು
ಮಾಧುಸ್ವಾಮಿ – ತುಮಕೂರು ಮತ್ತು ಹಾಸನ ಉಸ್ತುವಾರಿ
ಕೋಟಾ ಶ್ರೀನಿವಾಸ ಪೂಜಾರಿ – ದಕ್ಷಿಣ ಕನ್ನಡ
ಗೋವಿಂದ ಕಾರಜೋಳ – ಬಾಗಲಕೋಟೆ, ಕಲಬುರಗಿ.
ಆರ್.ಅಶೋಕ್ – ಬೆಂಗಳೂರು ಗ್ರಾ. ಮತ್ತು ಮಂಡ್ಯ
ಸಿ.ಸಿ. ಪಾಟೀಲ್ – ಗದಗ ಮತ್ತು ವಿಜಯಪುರ
ಲಕ್ಷ್ಮಣ ಸವದಿ – ಬಳ್ಳಾರಿ ಮತ್ತು ಕೊಪ್ಪಳ
ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ ಮತ್ತು ದಾವಣಗೆರೆ
ಶಶಿಕಲಾ ಜೊಲ್ಲೆ – ಉತ್ತರ ಕನ್ನಡ
ಪ್ರಭು ಚೌಹಾಣ್ – ಬೀದರ್, ಯಾದಗಿರಿ ಉಸ್ತುವಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…