ದಕ್ಷ ಅಧಿಕಾರಿಗೆ “ದಿವ್ಯ’ ಬೀಳ್ಕೊಡುಗೆ


Team Udayavani, Jun 16, 2019, 3:03 AM IST

daksha

ಬೆಳಗಾವಿ: ಅದೊಂದು ಅಪೂರ್ವ ಕ್ಷಣ. ನಗರದ ಜನಪ್ರಿಯ ಅಧಿಕಾರಿಯಾಗಿ ಈಗ ಪ್ರಧಾನಿ ಕಚೇರಿಗೆ ವರ್ಗವಾಗಿ ತೆರಳುತ್ತಿರುವ ಮಹಿಳಾ ಐಎಎಸ್‌ ಅಧಿಕಾರಿಯೊಬ್ಬರಿಗೆ ದೊರೆತ ಅಭೂತಪೂರ್ವ ಬೀಳ್ಕೊಡುಗೆಯ ಕಾರ್ಯಕ್ರಮವದು.

ದೆಹಲಿಯ ಪ್ರಧಾನಮಂತ್ರಿ ಕಚೇರಿಗೆ ವರ್ಗಾವಣೆಗೊಂಡು ತೆರಳುತ್ತಿರುವ ಅಧಿಕಾರಿ ದಿವ್ಯಾ ಶಿವರಾಮ ಅವರ ಅಭಿಮಾನಿಗಳು, ಸಾರ್ವಜನಿಕರು ಅವರನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಿ, ಅಧಿಕಾರಿಯ ಮೇಲಿರುವ ಪ್ರೀತಿ ಹಾಗೂ ಅಭಿಮಾನ ಪ್ರದರ್ಶಿಸಿದರು.

ಒಬ್ಬ ಅಧಿಕಾರಿ ಸಾರ್ವಜನಿಕರ ಜತೆ ಪ್ರೀತಿಯಿಂದ ಇದ್ದರೆ, ಅವರ ಬೇಕು-ಬೇಡಿಕೆಗಳಿಗೆ ಸಕಾಲಕ್ಕೆ ಸ್ಪಂದಿಸಿ ಅಗತ್ಯ ಸಹಾಯ ಹಸ್ತ ಚಾಚಿದರೆ ಅವರಿಗೆ ಮರಳಿ ಅಂತಹುದೇ ಪ್ರೀತಿ, ಗೌರವ ಸಿಗುತ್ತದೆ ಎನ್ನುವುದಕ್ಕೆ ಇದೇ ಸಾಕ್ಷಿ.

ಬೀಳ್ಕೊಡುಗೆ ಸಮಾರಂಭದ ಬಳಿಕ ದಂಡು ಮಂಡಳಿ ಪ್ರದೇಶದ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಸಿಇಒ ದಿವ್ಯಾ ಶಿವರಾಮ್‌ ಹೊಸೂರ ಅವರನ್ನು ಜೀಪ್‌ನಲ್ಲಿ ಮೆರವಣಿಗೆ ಮಾಡಿದರು. ಹೂಗಳಿಂದ ಅಲಂಕರಿಸಿದ್ದ ಜೀಪಿಗೆ ಹಗ್ಗ ಕಟ್ಟಿ ಕಚೇರಿಯಿಂದ ಎಳೆದುಕೊಂಡು ಸರ್ಕಾರಿ ನಿವಾಸದವರೆಗೆ ಕರೆ ತಂದು ಬೀಳ್ಕೊಟ್ಟರು.

ಈ ದೃಶ್ಯ ಕಂಡು ದಿವ್ಯಾ ಭಾವುಕರಾದರು. ಕಡಿಮೆ ಅವಧಿಯ ತಮ್ಮ ಸೇವೆಯಲ್ಲಿ ಎಲ್ಲರಿಗೂ ಆತ್ಮೀಯರಾಗಿದ್ದ ಈ ಅಧಿಕಾರಿ, ತಮ್ಮ ವರ್ಗಾವಣೆ ಸಂದರ್ಭದಲ್ಲಿ ಅದೇ ರೀತಿಯ ಅತ್ಮೀಯ ಬೀಳ್ಕೊಡುಗೆಯ ಗೌರವಕ್ಕೆ ಪಾತ್ರರಾಗಿದ್ದಾರೆ.

ಇದನ್ನೂ ಮುನ್ನ ನಡೆದ ಸಮಾರಂಭದಲ್ಲಿ ದಿವ್ಯಾ ಶಿವರಾಮ್‌ ಹೊಸೂರ ಹಾಗೂ ಪತಿ ಶ್ರೇಯಸ ಹೊಸೂರ ಅವರನ್ನು ಸತ್ಕರಿಸಲಾಯಿತು. ನಂತರ ಮಾತನಾಡಿದ ದಿವ್ಯಾ, “ಇಲ್ಲಿ ಕರ್ತವ್ಯ ನಿರ್ವಹಿಸಿದ್ದು ನನಗೆ ಹೆಮ್ಮೆ ಇದೆ.

ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಂಟೋನ್ಮೆಂಟ್‌ ಪ್ರದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಸದಸ್ಯರು ಹಾಗೂ ಸಿಬ್ಬಂದಿಯ ಸಂಪೂರ್ಣ ಸಹಕಾರದಿಂದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಯಿತು’ ಎಂದು ಹೇಳಿದರು.

ಸದಸ್ಯ ಸಾಜೀದ ಶೇಖ ಮಾತನಾಡಿ, ಇಂಥ ದಕ್ಷ ಅಧಿಕಾರಿಗಳಿಂದ ಕಂಟೋನ್ಮೆಂಟ್‌ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಇನ್ನು ಕೆಲ ವರ್ಷಗಳ ಕಾಲ ಇಲ್ಲಿಯೇ ಅಧಿಕಾರಿಯಾಗಿದ್ದರೆ ಹೆಚ್ಚಿನ ಅಭಿವೃದ್ಧಿ ಕಾಣಬಹುದಿತ್ತು ಎಂದು ಆಶಿಸಿದರು.

37 ವರ್ಷಗಳ ನಂತರ ನಡೆದ ಕಾರ್ಯಕ್ರಮ: 1982ರಲ್ಲಿ ಅಂದರೆ, ಸುಮಾರು 37 ವರ್ಷಗಳ ಹಿಂದೆಯೂ ಇದೇ ರೀತಿ ಆಗಿನ ಸಿಇಒ ಜೈನುದ್ದಿನ್‌ ಅವರನ್ನು ಬೀಳ್ಕೊಡಲಾಗಿತ್ತು. ಜೈನುದ್ದಿನ್‌ ಅವರ ವರ್ಗಾವಣೆಯಾದ ಬಳಿಕ ಜೀಪ್‌ನಲ್ಲಿ ಮೆರವಣಿಗೆ ಮಾಡಿ ಆತ್ಮೀಯವಾಗಿ ಬೀಳ್ಕೊಡಲಾಗಿತ್ತು. ಸದಸ್ಯ ಸಾಜೀದ ಶೇಖ ಅವರ ತಂದೆ ಆಗ ಸದಸ್ಯರಾಗಿದ್ದರು. ಆಗಿನ ಮೆರವಣಿಗೆಯ ಸವಿನೆನಪನ್ನು ಈಗ ಕ್ಯಾಂಪ್‌ ಪ್ರದೇಶದ ಜನ ಸ್ಮರಿಸಿಕೊಂಡರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.