ಚೆನ್ನಪಟ್ಟಣ:ಯೋಗೇಶ್ವರ್ ವಿರುದ್ಧ ಡಿಕೆ ಬ್ರದರ್ಸ್ ಸಮರ!
Team Udayavani, Jan 3, 2018, 4:23 PM IST
ಚೆನ್ನಪಟ್ಟಣ : ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಚೆನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಂಡಾಮಂಡಲವಾದ ಘಟನೆ ಬುಧವಾರ ನಡೆಯಿತು.
ಚೆನ್ನಪಟ್ಟಣದಲ್ಲಿ ನಡೆದ ಸರ್ಕಾರದ ಬೃಹತ್ ಸಾಧನಾ ಸಮಾವೇಶದಲ್ಲಿ ತೀವ್ರವಾಗಿ ಕಿಡಿ ಕಾರಿದ ಡಿ.ಕೆ.ಶಿವಕುಮಾರ್ ಅವರು ‘ಮುಂದಿನ ಚುನಾವಣೆಯಲ್ಲಿ ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಹೆಸರಿಗೆ ಮಾತ್ರ, ನಿಜವಾದ ಅಭ್ಯರ್ಥಿಗಳು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ .ಸುರೇಶ್ . ನಾವು ನಿಮ್ಮ ಸೇವೆ ಮಾಡುತ್ತೇವೆ, ನಿಮ್ಮ ಆಶೋತ್ತರಗಳಿಗೆ ಸ್ಪಂದಿಸುತ್ತೇವೆ’ ಎಂದು ಗುಡುಗಿದರು.
‘ಎಲ್ಲವನ್ನು ಕೊಟ್ಟ ಪಕ್ಷಕ್ಕೆ ಯೋಗೇಶ್ವರ್ ದ್ರೋಹ ಎಸಗಿ ಬಿಜೆಪಿಗೆ ಸೇರಿದ್ದಾರೆ. ಅವರು ಹೆತ್ತ ತಾಯಿಗೆ ಮೋಸ ಮಾಡಿದಂತಾಗಿದೆ. ಉಪಕಾರ ಪಡೆದು ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬೇಡಿ’ ಎಂದು ಕಿಡಿ ಕಾರಿದರು.
ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಯೋಗೇಶ್ವರ್ ವಿರುದ್ಧ ಕಿಡಿ ಕಾರಿದರು. ‘ಯೋಗೇಶ್ವರ್ ಸರ್ಕಾರಿ ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ. ಇಲ್ಲಿ ಬಂದರೆ ಸುಳ್ಳು ಹೇಳಿದ್ದು ಗೊತ್ತಾಗುತ್ತದೆ ಅಲ್ಲವೇ ಅದಕ್ಕೇ ಬರಲಿಲ್ಲ. ಅಭಿವೃದ್ಧಿ ಮಾಡಿದ್ದೇನೆ ಅನ್ನುತ್ತಾರಲ್ಲ, ನಾನು ಅನುದಾನವನ್ನೇ ಕೊಡದಿದ್ದರೆ ಅಭಿವೃದ್ಧಿ ಹೇಗೆ ಮಾಡುತ್ತಿದ್ದರು’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್