DK ಬ್ರದರ್ಸ್ ಕನಕಪುರಕ್ಕೆ ಸೀಮಿತವಲ್ಲ..: ಸಿ.ಪಿ.ಯೋಗೇಶ್ವರ್ ಕಿಡಿ
ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಬೇಕು... ಗ್ರಾಮಾಂತರ ಕ್ಷೇತ್ರ ನೂರಕ್ಕೆ ನೂರು ಗೆಲ್ತೀವಿ..
Team Udayavani, Sep 6, 2023, 3:57 PM IST
ರಾಮನಗರ : ‘ಅಣ್ಣ ತಮ್ಮಂದಿರು ಕನಕಪುರಕ್ಕೆ ಸೀಮಿತವಲ್ಲ, ರಾಮನಗರಕ್ಕೆಅನ್ಯಾಯ ಮಾಡಿದರೆ ಅವರು ಅನುಭವಿಸುತ್ತಾರೆ’ ಎಂದು ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬುಧವಾರ ಕಿಡಿ ಕಾರಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇರು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸುತ್ತಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ‘ರಾಜೀವ್ ಗಾಂಧಿ ಆರೋಗ್ಯ ವಿವಿ ಅವಿಭಾಜ್ಯ ಅಂಗವಾಗಿದ್ದು ಮೆಡಿಕಲ್ ಕಾಲೇಜು ಕ್ಯಾಂಪಸ್ ಒಳಗೆ ಇರಬೇಕು.ಡಿಸಿಎಂ, ಸಿಎಂ, ಸಂಸದರು ಯಾವ ಉದ್ದೇಶದಿಂದ ವರ್ಗಾವಣೆ ಮಾಡಿದ್ದಾರೋ ಗೊತ್ತಿಲ್ಲ.ಪ್ರತಿಭಟನೆ ಬಳಿಕ ತೀರ್ಮಾನಕ್ಕೆ ಬರುತ್ತದೆ ಅಂತ ಗೊತ್ತಿದೆ.ಸಿಎಂ ಸಿದ್ದರಾಮಯ್ಯ ಅವರು ಡಿಕೆಶಿ ಧಮಕಿಗೆ ಬಗ್ಗಬಾರದು” ಎಂದರು.
”ಶಿವಕುಮಾರ್ ಸ್ವಂತ ಮೆಡಿಕಲ್ ಕಾಲೇಜು ಮಾಡಬಹುದಿತ್ತು.ಅವರದು ಹತ್ತಾರು ಸಂಸ್ಥೆ ಇದೆ.ದಯಾನಂದ ಸಾಗರ್ ಕನಕಪುರ ರಸ್ತೆಯಲ್ಲಿ ಇದೆ. ಅವರಿಗೆ ಶಕ್ತಿ ಇದೆ ಹೊಸದಾಗಿ ಮಾಡಲಿ.ಕನಕಪುರದಿಂದ ಚಿಕ್ಕಬಳ್ಳಾಪುರ ಕ್ಕೆ ಹೋಗಿಲ್ಲ.ಅಣ್ಣ, ತಮ್ಮ ಬುದ್ದಿವಂತರಿದ್ದೀರಿ, ಯೋಚನೆ ಮಾಡಿ,ನಾನೂ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ” ಎಂದರು.
”ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ನೂರಕ್ಕೆ ನೂರು ಗೆಲ್ತೀವಿ. ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಮನವಿ. ಪ್ರಧಾನಿ ಯಾಗಿ ಮೋದಿ ಅವರನ್ನು ಮತ್ತೆ ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಬಿಜೆಪಿ 20 ಸ್ಥಾನ ಗೆಲ್ಲಬೇಕು.ಎಚ್ ಡಿಕೆ ಮತ್ತು ನಾನು ರಾಜಕೀಯವಾಗಿ ವಿರೋಧವಾಗೇ ಇದ್ದೆವು.ಯಾವುದೇ ಒಳ ಒಪ್ಪಂದ ಮಾಡಿಕೊಂಡಿರಲಿಲ್ಲ” ಎಂದರು.
”ಕಾವೇರಿ ವಿಚಾರದಲ್ಲಿಡಿ.ಕೆ.ಶಿವಕುಮಾರ್ ಅವರಿಗೆ ಬದ್ದತೆ ಇಲ್ಲ.ಐಎನ್ ಡಿಐಎ ಮಿತ್ರಪಕ್ಷ ಡಿಎಂಕೆಯ ಸ್ಟಾಲಿನ್ ನಡುವೆ ವ್ಯಾಪಾರ ವ್ಯವಹಾರ ಸಂಬಂಧ ಇದೆ. ಬೆಂಗಳೂರಿಗೆ ಕುಡಿಯುವ ಸಮಸ್ಯೆ ಅವರಿಗೆ ಬೇಕಿಲ್ಲ.ಡಿ.ಕೆ.ಶಿವಕುಮಾರ್ ಅವರಿಂದ ಈ ರಾಜ್ಯದ ಜನ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ