ಡಿ.ಕೆ.ರವಿ ಸಾವಿನ ಪ್ರಕರಣ: ಶೆಟ್ಟರ್‌-ಜಾರ್ಜ್‌ ಚಕಮಕಿ


Team Udayavani, Jun 16, 2017, 3:45 AM IST

shetter.jpg

ವಿಧಾನಸಭೆ: ಐಎಎಸ್‌ ಅಧಿಕಾರಿ ಡಿ.ಕೆ.ರವಿ ಮೃತಪಟ್ಟ ಪ್ರಕರಣ ಗುರುವಾರ ಸಚಿವ ಕೆ.ಜೆ.ಜಾರ್ಜ್‌ ಮತ್ತು ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ನಡುವೆ ವಾಗ್ವಾದಕ್ಕೆ ಕಾರಣವಾಯಿತಲ್ಲದೆ, ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸದನದಲ್ಲಿ ಗದ್ದಲದ ಪರಿಸ್ಥಿತಿ ಉಂಟಾಯಿತು.

ಇಲಾಖಾ ಅನುದಾನಗಳ ಬೇಡಿಕೆ ಮೇಲೆ ಚರ್ಚೆ ನಡೆಯುತ್ತಿದ್ದಾಗ ಪೊಲೀಸ್‌ ಇಲಾಖೆ ಕಾರ್ಯವೈಖರಿ ಬಗ್ಗೆ ಪ್ರಸ್ತಾಪವಾಯಿತು. ಪೊಲೀಸರು ವಿವೇಚನಾರಹಿತವಾಗಿ ಅಧಿಕಾರ ಬಳಸಿದರೆ ಏನಾಗುತ್ತದೆ ಎಂದು ವಿವರಿಸುತ್ತಿದ್ದ
ರಮೇಶ್‌ಕುಮಾರ್‌, ವಿನಾ ಕಾರಣ ಆರೋಪಗಳು ಮೈಮೇಲೆ ಬರುವ ಬಗ್ಗೆಯೂ ಹೇಳಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಚಿವ ಕೆ.ಜೆ.ಜಾರ್ಜ್‌, ಐಎಎಸ್‌ ಅಧಿಕಾರಿ ಡಿ.ಕೆ.ರವಿ ಮೃತಪಟ್ಟಾಗ ನನ್ನ ಮೇಲೆ ಆರೋಪ
ಮಾಡಲಾಯಿತು. ನಾನೇ ಅವರ ಹತ್ಯೆಯ ಹಿಂದಿದ್ದೇನೆ ಎನ್ನುವ ರೀತಿಯಲ್ಲಿ ವಿಧಾನಸಭೆಯ ಒಳಗೆ ಮತ್ತು ಹೊರಗೆ ಮಾತನಾಡಿದರು. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು.

ಸಿಬಿಐ ತನಿಖೆ ನಡೆಯುತ್ತಿದ್ದಾಗ ಹಿಂದೆ ನನ್ನ ಮೇಲೆ ಆರೋಪ ಮಾಡಿದವರಾರೂ ಅವರಿಗೆ ದಾಖಲೆಗಳನ್ನು ಒದಗಿಸಲಿಲ್ಲ. ಕೊನೆಗೆ ಸಿಬಿಐ ತನಿಖೆ ಮುಗಿದು ವರದಿ ಬಂದಾಗ ಸಾವಿನ ಹಿಂದಿನ ಕಾರಣಗಳು ಗೊತ್ತಾಯಿತು. ನನ್ನ
ಪಾತ್ರವೇನೂ ಇಲ್ಲ ಎಂಬುದೂ ಸ್ಪಷ್ಟವಾಯಿತು. ಆದರೆ, ಯಾರೊಬ್ಬರೂ ಸಿಬಿಐ ವರದಿ ಓದಲಿಲ್ಲ ಮತ್ತು ನನ್ನ ಮೇಲೆ ಮಾಡಿದ ವೃಥಾರೋಪಕ್ಕೆ ವಿಷಾದವನ್ನೂ ವ್ಯಕ್ತಪಡಿಸಲಿಲ್ಲ ಎಂದರು.

ಕಾಂಗ್ರೆಸ್‌-ಬಿಜೆಪಿ ಗದ್ದಲ: ಅಷ್ಟರಲ್ಲಿ ಕಾಂಗ್ರೆಸ್‌ನ ಕೆ.ಎನ್‌.ರಾಜಣ್ಣ ಎದ್ದುನಿಂತು, ಅದಕ್ಕೇ ನೀವು ಕೆ.ಜೆ. ಜಾರ್ಜ್‌, ಅವರು (ಆರೋಪ ಮಾಡಿದವರು) ಜಗದೀಶ್‌ ಶೆಟ್ಟರ್‌ ಎಂದಾಗ ಆಕ್ರೋಶಗೊಂಡ ಜಗದೀಶ್‌ ಶೆಟ್ಟರ್‌, ಆ ಸಂದರ್ಭದಲ್ಲಿ ನಮಗೆ
ಬಂದ ಮಾಹಿತಿ ಆಧರಿಸಿ ಸದನದಲ್ಲಿ ಪ್ರಸ್ತಾಪಿಸಿದೆ ಎಂದಾಗ ಜಾರ್ಜ್‌ ಎದ್ದುನಿಂತು ಶೆಟ್ಟರ್‌ ವಿರುದ್ಧ ಕಿಡಿ ಕಾರಿದರು. ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕಾಂಗ್ರೆಸ್‌ ಸದಸ್ಯರು ಜಾರ್ಜ್‌ ಬೆನ್ನಿಗೆ ನಿಂತರೆ, ಬಿಜೆಪಿ
ಸದಸ್ಯರು ಜಗದೀಶ್‌ ಶೆಟ್ಟರ್‌ ಪರ ಎದ್ದುನಿಂತು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದರು.

ಯಾರು, ಏನು ಹೇಳುತ್ತಿದ್ದಾರೆ ಎಂಬುದೇ ಅರ್ಥವಾಗಲಿಲ್ಲ.

ಆರೋಪ ಬಂದಾಗ ಕ್ಲೀನ್‌ಚಿಟ್‌:
ಗದ್ದಲ ಕೈಮೀರುತ್ತಿರುವುದನ್ನು ಗಮನಿಸಿದ ಸ್ಪೀಕರ್‌ ಕೆ.ಬಿ.ಕೋಳಿವಾಡ ಎಲ್ಲಾ ಸದಸ್ಯರನ್ನೂ ಸಮಾಧಾನಪಡಿಸಿದರು. ಆದರೂ ಜಾರ್ಜ್‌ ಮತ್ತು ಶೆಟ್ಟರ್‌ ನಡುವಿನ ಜಗಳ ತಣ್ಣಗಾಗಲಿಲ್ಲ. ಜಾರ್ಜ್‌ ಅವರು ಶೆಟ್ಟರ್‌ ವಿರುದ್ಧ ಟೀಕೆ
ಮುಂದುವರಿಸಿದರೆ, ಡಿವೈಎಸ್ಪಿ ಗಣಪತಿ ಹತ್ಯೆ ಪ್ರಕರಣದಲ್ಲಿ ನಿಮ್ಮ ವಿರುದ್ಧ ನ್ಯಾಯಾಂಗ ತನಿಖೆ ನಡೆಯುತ್ತಿದ್ದರೂ ಸಿಐಡಿ ಮೂಲಕ ಕ್ಲೀನ್‌ಚಿಟ್‌ ಪಡೆದುಕೊಂಡಿರಿ. ಆಡಳಿತ ಪಕ್ಷದ ಯಾರ ಮೇಲಾದರೂ ಆರೋಪ ಬಂದಾಗ ಸಿಐಡಿ ತನಿಖೆ ನಡೆಸಿ ಕ್ಲೀನ್‌ ಚಿಟ್‌ ಕೊಡಿಸುತ್ತಿದ್ದೀರಿ ಎಂದು ಶೆಟ್ಟರ್‌ ಮತ್ತೆ ಕೆಣಕಿದರು.

ತಾವು ಎದ್ದುನಿಂತು ಆದೇಶಿಸಿದರೂ ಪರಿಸ್ಥಿತಿ ತಹಬದಿಗೆ ಬಾರದ ಕಾರಣ ಅಸಮಾಧಾನಗೊಂಡ ಸ್ಪೀಕರ್‌, ಇಲಾಖಾ ಅನುದಾನಗಳ ಬೇಡಿಕೆ ಮೇಲೆ ಸದಸ್ಯ ರಾಜೀವ್‌ ಮಾತನಾಡುವುದನ್ನು ಹೊರತುಪಡಿಸಿ ಬೇರೆ ಯಾವುದೇ ಮಾತು ಕಡತಕ್ಕೆ ಹೋಗಬಾರದು ಎಂದು ಸೂಚನೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.