ನಿಮ್ಮ ತಂದೆಯನ್ನು ಪಿಎಂ, ನಿಮ್ಮನ್ನು ಸಿಎಂ ಮಾಡಿದ್ದು ಕಾಂಗ್ರೆಸ್: HDKಗೆ ಡಿಕೆಶಿ ತಿರುಗೇಟು
Team Udayavani, Dec 28, 2020, 4:19 PM IST
ಬೆಂಗಳೂರು: ದೇವೇಗೌಡರನ್ನು ಪ್ರಧಾನಿ ನಿಮ್ಮನ್ನು ಎರಡನೇ ಬಾರಿ ಸಿಎಂ ಮಾಡಿದ್ದು ಕಾಂಗ್ರೆಸ್ ಪಕ್ಷ. ನಾನು ನನ್ನ ಸ್ವಾಭಿಮಾನ ಬಿಟ್ಟಿಕೊಡಲು ಸಾಧ್ಯವಿಲ್ಲ. ನನ್ನ ಬಗ್ಗೆ ವೈಯಕ್ತಿಕವಾಗಿ ಮಾತಾನಾಡಿ ಆದರೆ ಕಾಂಗ್ರೆಸ್ ಪಕ್ಷದ ಧ್ವಜದ ಬಗ್ಗೆ ಮಾತನಾಡೋದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಧ್ವಜದ ಬೆಲೆ ಹೋಗಿದೆ ಹೀಗಾಗಿ ಹಸಿರು ಶಾಲು ಹಾಕಿಕೊಂಡಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.
ಇದನ್ನೂ ಓದಿ:ನಾನು ದನದ ಮಾಂಸ ತಿನುತ್ತೇನೆ, ಆಹಾರ ಪದ್ಧತಿ ನನ್ನ ಹಕ್ಕು, ಕೇಳುವವರು ಯಾರು? ಸಿದ್ದರಾಮಯ್ಯ
ಕಾಂಗ್ರೆಸ್ ಗೆ ಇದೊಂದು ಐತಿಹಾಸಿ ದಿನ. ಇಂತಹ ಪವಿತ್ರ ಕಾರ್ಯಕ್ರಮದಲ್ಲಿ ಭಾಗಿ ಆಗಿರುವುದು ನಮ್ಮ ಪುಣ್ಯ. ಬಹಳಷ್ಟು ಬುದ್ದಿವಂತರು ಸೇರಿ ಕಾಂಗ್ರೆಸ್ ಪಕ್ಷ ಸ್ಥಾಪಿಸಿದ್ದಾರೆ. ತ್ರಿವರ್ಣ ಧ್ವಜವನ್ನು ಹಾಕಿಕೊಳ್ಳುವ ಭಾಗ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಇದೆ ಎಂದು ಡಿಕೆಶಿ ಹೇಳಿದರು.