ಚರ್ಚೆಗೆ ಗ್ರಾಸವಾದ ಡಿಕೆಶಿ ವಿದೇಶ ಪ್ರವಾಸ
Team Udayavani, May 28, 2019, 6:00 AM IST
ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೆಲ್ಬೋರ್ನ್ ನಲ್ಲಿ ಕುಟುಂಬದೊಂದಿಗೆ ಫೋಟೊಗೆ ಫೋಸ್ ನೀಡಿರುವುದು.
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಆಪರೇಷನ್ ಕಮಲ ಭೀತಿ ಎದುರಾಗಿರುವ ಸಂದರ್ಭದಲ್ಲಿಯೇ ಸಚಿವ ಡಿ.ಕೆ.ಶಿವಕುಮಾರ್ ಅವರು ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಕಾರ್ಯತಂತ್ರ ರೂಪಿಸುತ್ತಿದ್ದು ಅದನ್ನು ತಡೆಯಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಣಗಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ಶಿವಕುಮಾರ್ ವಿದೇಶದಲ್ಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.