‘ಅವರಿಗೆ ಉತ್ತರ ಕೊಡೋಕೆ ಆಗೋಲ್ಲ’ : ರಮೇಶ್ ಹೇಳಿಕೆಗೆ ಡಿಕೆಶಿ ಪ್ರತ್ಯುತ್ತರ
Team Udayavani, Mar 27, 2021, 6:53 PM IST
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತಮ್ಮ ಮೇಲೆ ನೇರ ಆರೋಪ ಮಾಡಿರುವ ರಮೇಶ್ ಜಾರಕಿಹೊಳಿ ಅವರಿಗೆ ಮೊದಲ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಇಂದು ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಅವರು ಫಸ್ಟ್ರೆಷನ್ನಲ್ಲಿದ್ದಾರೆ. ಅವರಿಗೆ ಏನೋ ಸಮಸ್ಯೆ ಇರಬಹುದು. ಅವರು ಏನು ಬೇಕಾದ್ದನ್ನು ಮಾತಾಡ್ತಾರೆ ಅದಕ್ಕೆ ನಾವು ತಲೆ ಕೆಡಿಸಿಕೊಳ್ಳೋಕೆ ಆಗೋಲ್ಲ. ಅವರಿಗೆ ಉತ್ತರ ಕೋಡೋಕೆ ಆಗೋಲ್ಲ. ಕಾನೂನು ಇದೆ, ಅಧಿಕಾರಿ ಇದೆ, ತನಿಖೆ ಮಾಡಲಿ, ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು.
ರಮೇಶ್ ದಿನಕ್ಕೆ ಒಂದು ರೀತಿ ಮಾತಾಡ್ತಾರೆ. ಅವರಿಗೆ ಉತ್ತರ ಕೊಡೋಕೆ ಆಗೋಲ್ಲ. ಅದು ವ್ಯಯಕ್ತಿಕ ಸಮಸ್ಯೆ, ಅವರೇ ಬಗೆಹರಿಸಿಕೊಳ್ಳಬೇಕು. ಕಾನೂನು ಪ್ರಕಾರ ಅವರು ಏನು ಬೇಕಾದ್ದನ್ನು ಮಾಡಲಿ. ಅವರದೇ ಸರ್ಕಾರ ಇದೆ, ತನಿಖೆ ಮಾಡಿಸಿ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸಲಿ ಎಂದರು.
ತಮ್ಮ ಮಗಳನ್ನು ಇಟ್ಟುಕೊಂಡು ರಾಜಕೀಯ ಮಾಡಬೇಡಿ ಎಂದು ಯುವತಿ ಪೋಷಕರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಕೆಶಿ, ನನಗೆ ಅದು ಬೇಕಾಗಿಲ್ಲ. ಇಂದು ಬೆಳಿಗ್ಗೆ ಹೇಳಿದಂತೆ ಆ ಯುವತಿಯನ್ನು ನಾನು ಭೇಟಿಯಾಗಿಲ್ಲ ಎಂದರು.
ಇನ್ನು ಇಂದು ಸಂಜೆ ಶಾಸಕ ರಮೇಶ್ ಜಾರಕಿಹೊಳಿಯವರು ಡಿಕೆಶಿ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಡಿಕೆಶಿ ವಿರುದ್ಧ ಗುಡುಗಿದ ರಮೇಶ್, ಇಂತಹ ಹೊಲಸು ಕೆಲಸ ಮಾಡುವ ಡಿಕೆಶಿ ರಾಜಕೀಯಕ್ಕೆ ನಾಲಾಯಕ್ ಎಂದು ವಾಗ್ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ