ಆಪರೇಷನ್ ಕಮಲದಿಂದ ಜನ್ಮ ತಾಳಿದ ಸರ್ಕಾರದಿಂದ ರಾಜ್ಯಕ್ಕೆ ಕಪ್ಪು ಚುಕ್ಕೆ ಬಂದಿದೆ: ಡಿಕೆಶಿ


Team Udayavani, Apr 24, 2022, 5:47 PM IST

Untitled-1

ದಾವಣಗೆರೆ: ಕರ್ನಾಟಕದಲ್ಲಿ ಬುಲ್ಡೋಜರ್ ಮಾದರಿ ಕಾನೂನು ತರಲು ಇದೇನು ಉತ್ತರ ಪ್ರದೇಶ ಅಲ್ಲ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಮಾದರಿ ತರಲು ಅಲ್ಲಿ ಬೇರೆ ಬೇರೆ ವಿಷಯಗಳು ಇದ್ದವು. ಆದರೆ, ರಾಜ್ಯದಲ್ಲಿ ಪ್ರಜ್ಞಾವಂತ ಜನರಿದ್ದಾರೆ. ಅಂತಹ ಪದ್ಧತಿ ತರಲು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ಉತ್ತರ ಪ್ರದೇಶದೊಂದಿಗೆ ಹೋಲಿಸಬಾರದು ಎಂದರು.

ರಾಜ್ಯದಲ್ಲಿ ಯಾಕಾದರೂ ಬಿಜೆಪಿ ಸರ್ಕಾರ ಬಂದಿದೆಯೋ ಎಂದು ಜನ ಕೊರಗುತ್ತಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದಿರುವುದು ಜನಾದೇಶದಿಂದಲ್ಲ. ಬದಲಿಗೆ ಶಾಸಕರನ್ನು ಖರೀದಿ ಮಾಡಿ ಆಪರೇಷನ್ ಕಮಲ ಮೂಲಕ. ಆಪರೇಷನ್ ಕಮಲದ ಮೂಲಕ ಅಧಿಕಾರ ನಡೆಸುತ್ತಿರುವುದನ್ನು ಸದನದಲ್ಲೇ ಶಾಸಕ ಶ್ರೀನಿವಾಸಗೌಡರೆ ಒಪ್ಪಿಕೊಂಡಿದ್ದಾರೆ. ಆಪರೇಷನ್ ಕಮಲದಿಂದ ಬಿಜೆಪಿ ಸರ್ಕಾರ ಜನ್ಮ ತಾಳಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಉನ್ನತ ಹುದ್ದೆಗಳಿಗೆ ಆರ್ ಎಸ್ ಎಸ್ ಕಾರ್ಯಕರ್ತರ ನೇಮಕದ ಯತ್ನ ನಡೆದಿದೆ : ಸತೀಶ್ ಜಾರಕಿಹೊಳಿ

ಈ ರೀತಿ ಅಕ್ರಮವಾಗಿ ಸರ್ಕಾರ ಮಾಡಿರುವ ಬಿಜೆಪಿಯವರು ಔಷಧಿ, ಗೊಬ್ಬರ, ನೇಮಕಾತಿ ಎಲ್ಲದರಲ್ಲೂ ದುಡ್ಡು ಹೊಡೆಯುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ.40 ರಷ್ಟು ಕಮಿಷನ್ ಪಡೆಯುತ್ತಿದ್ದಾರೆ. ಬಿಜೆಪಿ ಇವತ್ತು ಇರುತ್ತದೆ, ನಾಳೆ ಹೋಗುತ್ತದೆ. ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ಕಪ್ಪು ಚುಕ್ಕೆ ಬಂದಿದೆ ಎಂದು ದೂರಿದರು.

ಕಬ್ಬಾಳಮ್ಮ ದೇವಸ್ಥಾನದಲ್ಲಿ ಸಾವಿರ ಮರಿ ಕಡಿಯುತ್ತಾರೆ. ಕಡಿದಿದ್ದನ್ನು ಮುಸ್ಲಿಂರೇ ಕ್ಲೀನ್ ಮಾಡುತ್ತಾರೆ. ಕೋಲಾರ, ರಾಮನಗರದಲ್ಲಿ ಮಾವಿನ ತೋಪಿಗೆ ಔಷಧಿ ಹೊಡೆಯುವರು ಯಾರು? ಚಿತ್ರದುರ್ಗದಲ್ಲಿ ಕುರಿಗಳ ವ್ಯಾಪಾರ ಆಗುತ್ತಿಲ್ಲ ಎನ್ನುವ ವರದಿ ನೋಡಿದೆ. 8 ಸಾವಿರವಿದ್ದ ಕುರಿಗಳು 3-4 ಸಾವಿರಕ್ಕೆ ಮಾರುತ್ತಿದ್ದಾರೆ. ಈಗ ಬಿಜೆಪಿಯವರು ಕುರಿಗಳನ್ನು ತಗೊಂಡು ಹೋಗುತ್ತಾರಾ ಎಂದು ಪ್ರಶ್ನಿಸಿದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಬದಲಾವಣೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅರಗ ಜ್ಞಾನೇಂದ್ರ ಅವರಂತಹ ಮುತ್ತುರತ್ನವನ್ನು ಅವರೇ ಇಟ್ಟಿಕೊಳ್ಳಲಿ. ಅಂತಹವರು ಬಿಜೆಪಿಯಲ್ಲಿ ಇದ್ದಾರೆ ಎಂದು ಹೇಳಲು ನಮಗೂ ಶಕ್ತಿ ಬರುತ್ತದೆ ಎಂದರು.

ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಬೇಕು. ಬಿಜೆಪಿಯವರು ಹಲಾಲ್‌‌, ಜಟ್ಕಾ ಕಟ್ ಇಲ್ಲಸಲ್ಲದ ವಿಚಾರ ಮುನ್ನೆಲೆಗೆ ತರುತ್ತಿದ್ದಾರೆ ಎಂದು ದೂರಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.