ಕೋವಿಡ್ ಹಗಲಲ್ಲಿ ಹರಡಲ್ಲ, ರಾತ್ರಿ ಮಾತ್ರ ಹರಡುತ್ತೆ ಎಂದ ವಿಜ್ಞಾನಿಯ ಫೋಟೋ ಕೊಡಿ : ಡಿಕೆಶಿ
Team Udayavani, Apr 10, 2021, 3:15 PM IST
ಬೆಳಗಾವಿ : ಕೋವಿಡ್ ಹಗಲಲ್ಲಿ ಹರಡುವುದಿಲ್ಲ, ರಾತ್ರಿ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದರೂ ತಿಳಿಸಿದರೆ ಅವರ ಫೋಟೊವನ್ನು ನಾವೂ ಇಟ್ಟುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಶನಿವಾರ ವ್ಯಂಗ್ಯವಾಡಿದ್ದಾರೆ.
ರಾತ್ರಿ ಕರ್ಫ್ಯೂ ಮಾಡಿ ಆರ್ಥಿಕತೆ ಹಾಳು ಮಾಡುತ್ತಿದ್ದಾರೆ. ರಾತ್ರಿ ಕರ್ಫ್ಯೂ ಇಂದ ಜನರನ್ನು ಮಾನಸಿಕವಾಗಿ ಕುಂದಿಸುತ್ತಿದ್ದಾರೆ. ಹಗಲಲ್ಲಿ ಕೋವಿಡ್ ಹರಡುವುದಿಲ್ಲವೇ? ಇವೆಲ್ಲ ಅವೈಜ್ಞಾನಿಕ ನಿರ್ಧಾರಗಳು ಎಂದು ಬಿಜೆಪಿ ವಿರುದ್ಧ ಡಿಕೆಶಿ ಕಿಡಿ ಕಾರಿದ್ದಾರೆ.
ಪತ್ರಕರ್ತರ ಜೊತೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಸಾರಿಗೆ ಮಂತ್ರಿ ಆದಾಗಿನಿಂದ ಕೈಗೊಂಡ ನಿರ್ಧಾರಗಳೆಲ್ಲವೂ ತಪ್ಪಾಗಿವೆ. ನೌಕರರು ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಮೊದಲು ಆ ನೌಕರರಿಗೆ ಸಂಬಳ ಕೊಡುವುದಕ್ಕೆ ಹೇಳಿ ಎಂದು ತಿರುಗೇಟು ನೀಡಿದರು.
ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ ದೊಡ್ಡ ನಾಯಕ. ಅವರು ಮೌಢ್ಯಗಳ ವಿರುದ್ಧ ಹೋರಾಡುತ್ತಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ನಂಬಿಕೆ ಇರುತ್ತದೆ ಎಂದರು. ಬೆಳಗಾವಿಯಲ್ಲಿ ಸತೀಶ್ ಗೆದ್ದೇ ಗೆಲ್ಲುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು