ಜಲವಿವಾದ ಬಗೆಹರಿಯುವ ಬಗ್ಗೆ ಸಿಎಂ ಭರವಸೆ ಕೊಟ್ಟಿದ್ದಾರೆ: ಡಿಕೆಶಿ
Team Udayavani, Mar 18, 2022, 8:25 PM IST
ಬೆಂಗಳೂರು: ಮೇಕೆದಾಟು, ಕೃಷ್ಣ ಯೋಜನೆಗೆ ಈಗಾಗಲೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಯಾವುದೇ ಕೆಳ ರಾಜ್ಯಗಳ ಪರ್ಮಿಷನ್ ಬೇಡ ಎಂದು ತೀರ್ಪು ಬಂದಿದೆ. 177 ಟಿಎಂಸಿ ನೀರಿಗೆ ಯಾವುದೇ ಪರ್ಮಿಷನ್ ಬೇಕಾಗಿಲ್ಲ. ಇದನ್ನು ಸಿಎಂ ಕೂಡ ಯಾವುದೇ ಅಡೆ ತಡೆಯಿಲ್ಲದೆ ಒಪ್ಪಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಸರ್ವ ಪಕ್ಷ ಸಭೆಯ ಬಳಿಕ ಮಾತಾನಾಡಿದ ಮಾಧ್ಯಮದವರೊಂದಿಗೆ ಅವರು, ನಾವು ಮೇಕೆದಾಟು ಹೋರಾಟ ಮಾಡಿದ್ವಿ, ಅದರ ಹಿನ್ನೆಲೆ ಇಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ನಮ್ಮ ನಿಲುವನ್ನು ಹೇಳಿದ್ದೇವೆ. ಸಿಎಂ ಕೇಂದ್ರದ ಮೇಲೆ ಒತ್ತಡ ತರುತ್ತೇವೆ ಅಂತ ಹೇಳಿದ್ದಾರೆ. ಒಂದು ವೇಳೆ ಅದು ಆಗಲಿಲ್ಲ ಅಂದರೆ ನಿಯೋಗ ಕರೆದುಕೊಂಡು ಹೋಗುತ್ತೇವೆ ಅಂತ ಹೇಳಿದ್ದಾರೆ ಎಂದರು.
ಇದನ್ನೂ ಓದಿ: ಅಧಿವೇಶನದ ಬಳಿಕ ಕೇಂದ್ರ ಸಚಿವರ ಜತೆ ಜಲವಿವಾದಗಳ ಬಗ್ಗೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ
ಕೃಷ್ಣ ಯೋಜನೆ ನ್ಯಾಷನಲ್ ಪ್ರಾಜೆಕ್ಟ್ ಆಗಬೇಕೆಂದು ಅಂತ ಹೇಳಿದ್ದೇವೆ. 2013 ರಲ್ಲಿ ಏನು ತೀರ್ಪು ಬಂದಿತ್ತೋ, ಅದು ನೋಟಿಫಿಕೇಷನ್ ಆಗಿಲ್ಲ. ಅದು ನೋಟಿಫಿಕೇಷನ್ ಆಗಬೇಕೆಂದು ಒತ್ತಾಯ ಮಾಡಿದ್ದೇವೆ ಎಂದರು.
ಸರ್ವ ಪಕ್ಷದ ಸಭೆಯ ಬಳಿಕ ಮಾತಾನಾಡಿದ ಮಾಜಿ ಸಚಿವ ಎಂ ಬಿ ಪಾಟೀಲ್, 9 ವರ್ಷ ಆಯಿತು. ಒಂದು ಗೆಜೆಟ್ ನೋಟಿಫಿಕೇಶನ್ ಕೃಷ್ಣದ ವಿಚಾರದಲ್ಲಿ ಆಗಿಲ್ಲ ಯಾವುದೇ ನೀರಾವರಿ ನ್ಯಾಷನಲ್ ಪ್ರಾಜೆಕ್ಟ್ ತಗೊಬೇಕು ಅಂದರೆ ಎರಡು ಲಕ್ಷ ಎಕರೆ ಬೇಕು ಈ ವಿಚಾರದಲ್ಲಿ ಮಾತಾಡಿದ್ದೇವೆ ಎಂದರು.
ಬಿಳಿಗುಂಡ್ಲುನಿಂದ ತಮಿಳುನಾಡಿಗೆ ನೀಡುವ ನೀರಿನ ವಿಚಾರದಲ್ಲಿ ಯಾವುದೇ ತೊಂದರೆ ಇಲ್ಲ. ಮಹಾದಾಯಿ ವಿಚಾರದಲ್ಲಿ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ತೆಗೆದುಕೊಳ್ಳಬೇಕು ಎನ್ವಿರಾನ್ಮೆಂಟಲ್ ಸ್ಟಡಿ ಮಾಡದೆ ನದಿ ಜೋಡಣೆ ವಿಚಾರದಲ್ಲಿ ಬಜೆಟ್ ನಲ್ಲಿ ಹಣ ಇಟ್ಟಿದ್ದಾರೆ ಇದು ತಪ್ಪು ಎಂದು ಹೇಳಿದ್ದೇವೆ ನದಿ ಜೋಡಣೆಯಲ್ಲಿ ಕೇರ್ ಫುಲ್ ಹೆಜ್ಜೆ ಇಡಬೇಕು ಎಲ್ಲರ ಅಭಿಪ್ರಾಯ ತೆಗೆದುಕೊಂಡು ಮುಂದೆ ಹೋಗಬೇಕು ಎಂದು ಹೇಳಿದ್ದೇವೆ ನಾವುಗಳು ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದೇವೆ ಎಲ್ಲಾ ನಮ್ಮ ಮನವಿ ಆಲಿಸಿ ಮುಂದೆ ಹೆಜ್ಜೆ ಇಡುತ್ತೇವೆ ಎಂದು ಹೇಳಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ