ಸಭಾಪತಿಗಳಿಗೆ ನಿರ್ಬಂಧ ಹಾಕಲು ಅಧಿಕಾರ ಕೊಟ್ಟಿದ್ದು ಯಾರು?; ಡಿ.ಕೆ ಶಿವಕುಮಾರ್
Team Udayavani, Dec 15, 2020, 7:33 PM IST
ನವದೆಹಲಿ: ‘ಸರ್ಕಾರದ ಮನವಿಗೆ ಗೌರವ ನೀಡಿ ಸಭಾಪತಿಗಳು ಕಲಾಪ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಸಂವಿಧಾನ ಬಾಹಿರವಾಗಿ ಸಭಾಪತಿಗಳಿಗೆ ನಿರ್ಬಂಧ ಹೇರಿದ್ದು ಯಾಕೆ? ಆ ಅಧಿಕಾರವನ್ನು ಅವರಿಗೆ ಕೊಟ್ಟಿದ್ದು ಯಾರು?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ,’ನಮ್ಮ ಸದನಗಳಿಗೆ ಬಹಳ ಗೌರವ, ಘನತೆ ಇದೆ. ರಾಜ್ಯಪಾಲರು, ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು. ಅದರ ಆಧಾರದ ಮೇಲೆ ಕಾರ್ಯದರ್ಶಿಗಳು ಪತ್ರ ಬರೆದರು ಎಂದು ವಿಧಾನ ಪರಿಷತ್ತಿನ ಸಭಾಪತಿಗಳು ಇಂದು ಕಲಾಪ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸಭಾಪತಿಗಳು ಬಂದು, ಗಂಟೆ ನಿಲ್ಲುವುದಕ್ಕೂ ಮುನ್ನ ಉಪಸಭಾಪತಿಗಳು ಹಠಾತ್ತನೆ ಬಂದು ಬಾಗಿಲು ಮುಚ್ಚಿ ಪೀಠದ ಬಳಿ ಬಂದು ಸಭಾಪತಿಗಳ ಪ್ರವೇಶಕ್ಕೆ ನಿರ್ಬಂಧ ಹಾಕಿದ್ದಾರೆ. ಇದು ಕರ್ನಾಟಕ ವಿಧಾನ ಮಂಡಲ ಹಾಗೂ ಅದರಲ್ಲೂ ವಿಶೇಷವಾಗಿ ವಿಧಾನ ಪರಿಷತ್ ಗೆ ಆದ ದೊಡ್ಡ ಅಪಮಾನ ಎಂದರು.
ಅವರ ಪತ್ರವನ್ನು ಸಭಾಪತಿಗಳು ತಿರಸ್ಕರಿಸಬಹುದಿತ್ತು. ಆದರೆ ಅವರ ಮಾತಿಗೆ ಗೌರವ ನೀಡಬೇಕು ಎಂದು ಕಲಾಪ ಆರಂಭಿಸಲು ಮುಂದಾದರು. ಅವರು ಕೂಡ ಕಲಾಪವನ್ನು ಸರಿಯಾಗಿ ನಡೆಯಲು ಅವಕಾಶ ಕೊಡಬೇಕಿತ್ತು.ಗೂಂಡಾಗಳು ಯಾರು? ಕಾನೂನು ಬಾಹಿರವಾಗಿ ಬಾಗಿಲು ಮುಚ್ಚಿದವರು ಯಾರು? ಸಭಾಪತಿಗಳು ಇದ್ದಾಗ ಅವರ ಪ್ರವೇಶಕ್ಕೆ ನಿರ್ಬಂಧ ಹಾಕಿದ್ದು ಯಾಕೆ? ಅವರಿಗೆ ಆ ಅಧಿಕಾರ ಕೊಟ್ಟಿದ್ದು ಯಾರು? ಎಂದು ಪ್ರಶ್ನೆ ಹಾಕಿದರು.
ಬಿಜೆಪಿ-ಜೆಡಿಎಸ್ ನಾಯಕರು ಮೇಲ್ಮನೆ ಸಭಾಪತಿಗಳ ಪದಚ್ಯುತಿಗೆ ತೀರ್ಮಾನಿಸಿದ್ದಾರೆ. ಅದು ಅವರ ನಿರ್ಧಾರ. ಅದು ಕಾನೂನಿನ ಚೌಕಟ್ಟಿನಲ್ಲಿ ನಡೆಯಬೇಕೆ ಹೊರತು ನಿಯಮ ಉಲ್ಲಂಘನೆ ಮಾಡುವುದು ಸರಿಯಲ್ಲ’ ಎಂದು ಹೇಳಿದರು.
ಹರಕೆ ತೀರಿಸಲು ಅಸ್ಸಾಂ ದೇವಾಲಯಕ್ಕೆ ಭೇಟಿ:
‘ಬಹಳ ದಿನಗಳಿಂದ ಹರಕೆ ತೀರಿಸುವುದು ಬಾಕಿ ಇತ್ತು. ಕಳೆದ ಒಂದೂವರೆ ವರ್ಷದಿಂದ ಆ ದೇವಾಲಯಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಸ್ಸಾಂನಲ್ಲಿರುವ ದೇವಾಲಯಕ್ಕೆ ತೆರಳಿ ಹರಕೆ ತೀರಿಸಿದ್ದೇನೆ. ಅಲ್ಲಿಂದ ದೆಹಲಿಗೆ ಆಗಮಿಸಿದ್ದೇನೆ. ಇಲ್ಲಿಗೆ ಬಂದಾಗ ನಮ್ಮ ನಾಯಕರನ್ನು ಭೇಟಿ ಮಾಡುವುದು ನಮ್ಮ ಕರ್ತವ್ಯ. ಅದನ್ನು ಮಾಡಿದ್ದೇನೆ.’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…