ಪದಾಧಿಕಾರಿಗಳ ಪಟ್ಟಿಗೆ ಒಪ್ಪಿಗೆ ಪಡೆಯಲು ಡಿಕೆಶಿ ಕಸರತ್ತು

300ಕ್ಕೂ ಹೆಚ್ಚು ಪದಾಧಿಕಾರಿಗಳ ಜಂಬೊ ಪಟ್ಟಿ ?

Team Udayavani, Mar 14, 2022, 8:05 AM IST

ಪದಾಧಿಕಾರಿಗಳ ಪಟ್ಟಿಗೆ ಒಪ್ಪಿಗೆ ಪಡೆಯಲು ಡಿಕೆಶಿ ಕಸರತ್ತು

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯ ಸೋಲಿನ ಅನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪಕ್ಷದ ಪದಾಧಿಕಾರಿಗಳ ನೇಮಕ ಮಾಡಿಕೊಳ್ಳಲು ಮುಂದಾಗಿದ್ದು, ಸೋಮವಾರ ರಾಹುಲ್‌ ಗಾಂಧಿ ಒಪ್ಪಿಗೆ ಪಡೆಯಲು ಕಸರತ್ತು ನಡೆಸಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎರಡೂವರೆ ವರ್ಷ ಪೂರೈಸುತ್ತಿದ್ದು, ಪಕ್ಷದ ಪದಾಧಿಕಾರಿಗಳ ನೇಮಕ ಮಾಡಿಕೊಳ್ಳದೇ ಉಪ ಚುನಾವಣಗಳ ಉಸ್ತುವಾರಿ ಹಾಗೂ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಗಳಿಗೆ ಮಾಜಿ ಪದಾಧಿಕಾರಿಗಳನ್ನೇ ಬಳಸಿಕೊಳ್ಳಲಾಗುತ್ತಿದೆ. ಸುಮಾರು 300 ಜನ ಪದಾಧಿಕಾರಿಗಳ ಜಂಬೊ ಪಟ್ಟಿಯನ್ನು ಸಿದ್ದಪಡಿಸಿಕೊಂಡು ದಿಲ್ಲಿಗೆ ತೆರಳಿದ್ದು, ಸೋಮವಾರ ಪಕ್ಷದ ಮುಖಂಡ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಪಟ್ಟಿಗೆ ಅಂತಿಮ ಒಪ್ಪಿಗೆ ಪಡೆಯಲು ಮುಂದಾಗಿದ್ದಾರೆ.

ಕಳೆದ ತಿಂಗಳು ಪದಾಧಿಕಾರಿಗಳ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾಗ ಪಕ್ಷದ ರಾಜ್ಯದ ಎಲ್ಲ ನಾಯಕರ ಅಭಿಪ್ರಾಯ ಪಡೆದು ಪಟ್ಟಿ ಸಿದ್ದಪಡಿಸಿಕೊಂಡು ಬರುವಂತೆ ರಾಹುಲ್‌ ಗಾಂಧಿ ಸಲಹೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅವರ ಸಲಹೆಯಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿಪಕ್ಷದ ನಾಯಕ ಸಿದ್ದರಾಮಯ್ಯ, ಐವರು ಕಾಯಾಧ್ಯಕ್ಷರು ಸೇರಿ ಪಕ್ಷದ ಇತರ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಪಟ್ಟಿ ಸಿದ್ದಪಡಿಸಿಕೊಂಡು ದಿಲ್ಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಪ್ರಯಾಣಿಕನ ಸಾವು: ವಿಮಾನ ತುರ್ತು ಭೂಸ್ಪರ್ಶ

ಸಂಘಟಿತ ಪ್ರಯತ್ನ ಇಲ್ಲ
ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯವಾಗಿ ಸೋಲು ಕಾಣಲು ಮೇಲ್ಮಟ್ಟದಲ್ಲಿ ನಾಯಕರ ಪ್ರಭಾವ ಇದ್ದರೂ, ಕೆಳ ಹಂತದಲ್ಲಿ ಕಾರ್ಯಕರ್ತರ ಸಂಘಟಿತ ಪ್ರಯತ್ನವಿಲ್ಲದಿರುವುದು ಕಾಂಗ್ರೆಸ್‌ ಸೋಲಿಗೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ರಾಜ್ಯದಲ್ಲಿಯೂ ಡಿ.ಕೆ.ಶಿವಕುಮಾರ್‌ ಪಕ್ಷದ ಅಧ್ಯಕ್ಷರಾಗಿ ಎರಡೂವರೆ ವರ್ಷ ಕಳೆದರೂ, ಪಕ್ಷದ ಕಾರ್ಯಕರ್ತರಿಗೆ ಅಧಿಕೃತ ಹುದ್ದೆ ನೀಡದೇ ಕೇವಲ ಹುದ್ದೆಯ ಆಸೆ ತೋರಿಸಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ.
ಆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಪಕ್ಷದಲ್ಲಿ ಅಧಿಕೃತ ಹುದ್ದೆ ನೀಡದೇ ಇದ್ದರೆ, ಮುಂದಿನ ಚುನಾವಣೆಯಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸಿದ್ದರೆ, ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಡಿ.ಕೆ. ಶಿವಕುಮಾರ್‌, ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.