ಹೈಕಮಾಂಡ್ ಸೂಚನೆ ಮೇರೆಗೆ ಗೋವಾಗೆ ಡಿಕೆಶಿ
Team Udayavani, Mar 8, 2022, 10:15 PM IST
ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಮಾರ್ಚ್ 10ರಂದು ಹೊರಬೀಳುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಗೋವಾಗೆ ತೆರಳಲು ಹೈಕಮಾಂಡ್ ಸೂಚನೆ ನೀಡಿದೆ.
ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆಯಿದ್ದು, ಕಳೆದ ಬಾರಿಯಂತೆ “ಆಪರೇಷನ್ ಕಮಲ’ ನಡೆಯಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಒಂದು ದಿನ ಮೊದಲೇ ಅಲ್ಲಿರುವಂತೆ ಡಿ.ಕೆ.ಶಿವಕುಮಾರ್ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಗೋವಾದಲ್ಲಿ ಸರಕಾರ ರಚಿಸಲು ಏನಾದರೂ ಅಡ್ಡಿ ಎದುರಾದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಡಿ.ಕೆ.ಶಿ.ಗೆ ಹೊಣೆಗಾರಿಕೆ ನೀಡಲಾಗಿದೆ ಎನ್ನಲಾಗಿದೆ.
ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್, ಹೈಕಮಾಂಡ್ ಗೋವಾಗೆ ತೆರಳುವಂತೆ ತಿಳಿಸಿದೆ. ಚುನಾವಣೆ ಪ್ರಚಾರದ ವೇಳೆ ನಾನು ಕೂಡ ಅಲ್ಲಿಗೆ ತೆರಳಿ ಪ್ರಚಾರ ಮಾಡಿದ್ದೆ. ರಾಜ್ಯದಿಂದ ನಮ್ಮ ತಂಡ ಕಳೆದ ಒಂದು ತಿಂಗಳಿಂದ ಅಲ್ಲಿ ಶ್ರಮಿಸುತ್ತಿದೆ. ಅಲ್ಲಿ ನಾವೆಲ್ಲರೂ ಸಾಕಷ್ಟು ಪರಿಶ್ರಮ ಹಾಕಿದ್ದೇವೆ. ಅಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಕಾರ್ಯಕರ್ತನಾಗಿ ಅಲ್ಲಿ ಶ್ರಮಿಸಲು, ಅಲ್ಲಿನ ನಮ್ಮ ಸಹೊದ್ಯೋಗಿಗಳಿಗೆ ಬೆಂಬಲವಾಗಿ ನಿಲ್ಲಲು ನಾನು ಗೋವಾಗೆ ತೆರಳುತ್ತಿದ್ದೇನೆ. ಗೋವಾದಲ್ಲಿ ನನ್ನ ನೇತೃತ್ವದಲ್ಲಿ ಅಲ್ಲ, ಗೋವಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್