ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಡಿಕೆ ಶಿವಕುಮಾರ್!
Team Udayavani, Aug 5, 2017, 5:33 PM IST
ಬೆಂಗಳೂರು: ನನ್ನ ಹಾಗೂ ಕುಟುಂಬಸ್ಥರು, ಆಪ್ತರ ನಿವಾಸ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ನನ್ನ ತಾಯಿ ಗೌರಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವ್ಯಕ್ತಪಡಿಸಿದ ಪ್ರತಿಕ್ರಿಯೆ ಬಗ್ಗೆ ಬಹಿರಂಗವಾಗಿ ಕ್ಷಮೆಯಾಚಿಸುವುದಾಗಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ತಾಯಿ ಗೌರಮ್ಮ ಉದ್ದೇಶಪೂರ್ವಕವಲ್ಲದೆ ಆಡಿರುವ ಮಾತುಗಳ ಬಗ್ಗೆ ಬಹಿರಂಗವಾಗಿ ಕ್ಷಮೆಯಾಚಿಸುತ್ತೇನೆ. ಕೆಲವು ಮಾಧ್ಯಮಗಳು ನನ್ನ ತಾಯಿಯನ್ನು ಪ್ರಚೋದಿಸಿವೆ. ನನ್ನ ತಾಯಿ ವಿದ್ಯಾವಂತರಲ್ಲ, ಐಟಿ ಇಲಾಖೆ ಯಾವ ಸರ್ಕಾರದ ಅಧೀನದಲ್ಲಿ ಬರುತ್ತದೆ ಎಂಬ ತಿಳಿವಳಿಕೆ ಇಲ್ಲ. ಪುತ್ರ ವಾತ್ಸಲ್ಯದಿಂದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ಸಮಜಾಯಿಷಿ ನೀಡಿದ್ದಾರೆ.
ಕೆಲವು ಮಾಧ್ಯಮಗಳಿಂದ ನನ್ನ ತಾಯಿಯನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಡಿಕೆಶಿ ಅವರು ಬಿಡುಗಡೆಗೊಳಿಸಿರುವ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ಮಾಧ್ಯಮಗಳ ವರದಿ ಹೇಳಿದೆ. ಈ ಸಂದರ್ಭದಲ್ಲಿ ತನಗೆ ಸಾಂತ್ವನ ಹೇಳಿದ ಕಾರ್ಯಕರ್ತರು, ಹಿರಿಯರು, ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !