ನಿರುದ್ಯೋಗದಿಂದ ಆತ್ಮಹತ್ಯೆ; ಆತ್ಮಾವಲೋಕನ ಮಾಡಿಕೊಳ್ಳಬೇಕು: ಡಿ.ಕೆ ಶಿವಕುಮಾರ್


Team Udayavani, May 16, 2022, 5:49 PM IST

1-asdsad

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಿರುದ್ಯೋಗ ಸಮಸ್ಯೆಯ ಕುರಿತು ಸರಣಿ ಟ್ವೀಟ್ ಮಾಡಿ ಈ ಬಗ್ಗೆ ಗಂಭೀರವಾಗಿ ಆಲೋಚಿಸಿ ಕ್ರಮ ಕೈಗೊಳ್ಳಲು ಧ್ವನಿ ಎತ್ತಿದ್ದಾರೆ.

“ಉಡುಪಿಯ 23 ವರ್ಷದ ಸಹನಾ ಆತ್ಮಹತ್ಯೆಯ ವಿಷಯ ತಿಳಿದು ಅತೀವ ದುಃಖವಾಗಿದೆ. ಎಂಬಿಎ ಪದವಿ ಪಡೆದರೂ ಸಹ ಸೂಕ್ತ ಕೆಲಸ ದೊರೆಯದೆ ಆಕೆ ಸಾವಿಗೆ ಶರಣಾಗಿದ್ದಾಳೆ. ನಿರುದ್ಯೋಗದ ಕಾರಣಕ್ಕಾಗಿ ಪ್ರಾಣಕಳೆದುಕೊಂಡಿರುವ ಪ್ರಕರಣ ರಾಜ್ಯದಲ್ಲಿ ಇದೇ ಮೊದಲೇನಲ್ಲ. ಅವಳ ಕುಟುಂಬಕ್ಕೆ ಸಾಂತ್ವನ ತಿಳಿಸುತ್ತೇನೆ. ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ತಿಳಿಸಿರುವ ಅವರು, “ನಾವು ಎಲ್ಲಿ ಎಡವುತ್ತಿದ್ದೇವೆ ಎನ್ನುವುದನ್ನು ಒಂದು ಸಮಾಜವಾಗಿ ಆತ್ಮಾವಲೋಕ‌ನ ಮಾಡಿಕೊಳ್ಳಬೇಕು. ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದಾದರೆ ಖಂಡಿತವಾಗಿಯೂ ನಾವು ತಪ್ಪು ಹೆಜ್ಜೆ ಇಡುತ್ತಿದ್ದೇವೆ.” ಎಂದು ಟ್ವೀಟ್ ಮಾಡಿದ್ದಾರೆ.

“ಇದೆಲ್ಲವು ಆಗುತ್ತಿರುವುದು ಯಾಕೆ? ನಮ್ಮ ಯುವಸಮೂಹ ಯಾಕೆ ಹತಾಶೆಯನ್ನು ಎದುರಿಸಬೇಕಿದೆ? ನೋಬೆಲ್ ಪುರಸ್ಕೃತರನ್ನು ಒಳಗೊಂಡಂತೆ ಜಗತ್ತಿನ ಹಲವು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಭಾರತೀಯರು. ಉದ್ಯೋಗಗಳನ್ನು ಸೃಷ್ಟಿ ಮಾಡಲು ನಾವು ಅವರ ಪರಿಣಿತಿಯನ್ನು ಉಪಯೋಗಿಸಿಕೊಳ್ಳಬಹುದಲ್ಲವೆ?” ಎನ್ನುವ ಮೂಲಕ ಡಿ.ಕೆ ಶಿವಕುಮಾರ್ ಅವರು ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅವಶ್ಯಕತೆಯ ಕುರಿತು ತಿಳಿಸಿದ್ದಾರೆ.

“ಭಾರತವು ಇದೀಗ 100 ಯುನಿಕಾರ್ನ್ ಕಂಪನಿಗಳ ಕ್ಲಬ್ ಗೆ ಸೇರಿದೆ. ಕರ್ನಾಟಕವು ಭಾರತದಾದ್ಯಂತದ ಜನರಿಗೆ ಉದ್ಯೋಗ ಸೃಷ್ಟಿಸುತ್ತಿದೆ. ಆದರೂ ಯಾಕೆ ಅತಿಹೆಚ್ಚಿನ ನಿರುದ್ಯೋಗ ಪ್ರಮಾಣ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ? ಮಾಧ್ಯಮಗಳು ಈ ಕುರಿತು ಯಾಕೆ ಚರ್ಚಿಸುತ್ತಿಲ್ಲ?” ಎಂದು ಪ್ರಶ್ನಿಸಿರುವ ಅವರು, ಯುವಸಮೂಹದ ಭವಿಷ್ಯದ ದೃಷ್ಟಿಯಿಂದ ಈ ಬಗ್ಗೆ ಗಂಭೀರವಾಗಿ ಆಲೋಚಿಸಿ ಕ್ರಮ ಕೈಗೊಳ್ಳಲು ಧ್ವನಿ ಎತ್ತಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.