ಇದು ಭಾಗ್ಯ, ಇದು ಭಾಗ್ಯ ಇದು ಭಾಗ್ಯವಯ್ಯಾ ಎಂದ ಡಿಕೆಶಿ

ಆದಿಚುಂಚನಗಿರಿ ಮಠದಲ್ಲಿ ಡಿಕೆಶಿ ಧಾರ್ಮಿಕ ನುಡಿ, ದಾಸರ ಪದ ಸ್ಮರಣೆ

Team Udayavani, Dec 26, 2021, 2:44 PM IST

DK

ಬೆಂಗಳೂರು : ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಸುಖವಯ್ಯ ಎಂದು ದಾಸರ ಪದ ಮೆಲುಕು ಹಾಕುವ ಜತೆಗೆ ಆಧ್ಯಾತ್ಮಿಕ ವಿಚಾರದ ಬಗ್ಗೆ ಮಾತನಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಈಗ ಎಲ್ಲರ ಹುಬ್ಬೇರಿಕೆಗೆ ಕಾರಣರಾಗಿದ್ದಾರೆ.

ಹೌದು. ಆದಿಚುಂಚನಗಿರಿ ಮಠದ ಸಂಗೀತೋತ್ಸವ ಹಾಗೂ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಡಾ.ನಿರ್ಮಲಾನಂಧ ಸ್ವಾಮೀಜಿಗಳ ಸಮ್ಮುಖದಲ್ಲಿ ಭಕ್ತಿಪರವಶರಾಗಿ ಮಾತನಾಡಿದರು.

ಈ ದೇಶದ ಆಸ್ತಿ ನಮ್ಮ ಸಂಸ್ಕೃತಿ. ಇಡಿ ವಿಶ್ವ ಭಾರತದತ್ತ ನೋಡುತ್ತಿದೆ ಎಂದರೆ ಅದಕ್ಕೆ ನಮ್ಮಲ್ಲಿರುವ ನ್ಯಾಯ, ಧರ್ಮ, ಬದ್ಧತೆ, ಸಂಸ್ಕೃತಿಯೇ ಕಾರಣ. ನಮ್ಮ ಪ್ರತಿಯೊಂದು ಆಚರಣೆಗೂ ಅದರದ್ದೇ ಆದ ಇತಿಹಾಸವಿದೆ. ನಾನು ಈ ಭಜನಾ ಕಾರ್ಯಕ್ರಮಕ್ಕೆ ಬಂದಿದ್ದೇ ಒಂದು ಭಾಗ್ಯ ಎಂದರು.

ಅಲೆಕ್ಸಾಂಡರ್‌ ವಿಶ್ವವನ್ನೇ ಗೆಲ್ಲಬೇಕೆಂದು ಭಾರತದತ್ತ ಬಂದಾಗ, ಭಾರತವನ್ನು ವಶಪಡಿಸಿಕೊಳ್ಳುವುದು ಸುಲಭವಲ್ಲ ಎಂದು ಅವನ ಗುರು ಎಚ್ಚರಿಸಿದ್ದರು. ನೀನು ಭಾರತದಿಂದ ಬರುವಾಗ ರಾಮಾಯಣ, ಮಹಾಭಾರತ, ಭಗವದ್ಗೀತೆ, ಗಂಗಾಜಲ-ಕೃಷ್ಣನ ಕೊಳಲು ಹಾಗೂ ತತ್ವಜ್ಞಾನದ ಹೊತ್ತಿಗೆಯನ್ನು ತೆಗೆದುಕೊಂಡು ಬಾ. ಆಗ ಇಡಿ ಭಾರತವನ್ನೇ ತಂದಂತಾಗುತ್ತದೆ ಎಂದು ಹೇಳಿದ್ದರು. ಇವೆಲ್ಲ ಭಾರತೀಯ ಸಂಸ್ಕೃತಿಯ ಪ್ರತೀಕಗಳು ಎಂದು ವಿವರಿಸಿದರು.

ಕೊಳಲು ಬಿದರಿನ ಸೃಷ್ಟಿ. ಬಿದಿರಿಗೆ ತಾನು ಕೊಳಲಾಗುತ್ತೇನೆಂದು ಗೊತ್ತಿಲ್ಲ, ಕೊಳಲಿಗೆ ನಾದವಾಗುತ್ತೇನೆಂದು ಗೊತ್ತಿಲ್ಲ, ನಾದಕ್ಕೆ ಆನಂದವಾಗುತ್ತೇನೆಂದು ಗೊತ್ತಿಲ್ಲ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅಕ್ಕಿ ಒಂದು ಕಡೆ, ಅರಿಶಿನ ಒಂದುಕಡೆ, ಎರಡು ಸೇರಿದಾಗ ಮಾತ್ರ ಅಕ್ಷತೆಯಾಗುತ್ತದೆ ಎಂದು ಹೇಳಿದರು. ಕಳೆದೆರಡು ದಿನಗಳಿಂದ ಕುಮಾರಸ್ವಾಮಿ ಹಾಗೂ ಶಿವಕುಮಾರ್‌ ಮಧ್ಯೆ ನಡೆಯುತ್ತಿದ್ದ ಪರೋಕ್ಷ ವಾಗ್ವಾದದ ಮಧ್ಯೆಯೇ ಡಿ.ಕೆ.ಶಿವಕುಮಾರ್‌ ಇಂದು ಆಡಿರುವ ಭಾವನಾತ್ಮಕ ಮಾತುಗಳು ಕುತೂಹಲ ಮೂಡಿಸಿತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.