ಬಹಿರಂಗ ಚರ್ಚೆಗೆ ಡಿಕೆಶಿ ಸವಾಲು
Team Udayavani, Nov 24, 2017, 8:59 AM IST
ವಿಧಾನಸಭೆ: ವಿದ್ಯುತ್ ಖರೀದಿ ಅಕ್ರಮಗಳ ಕುರಿತ ಸದನ ಸಮಿತಿ ವರದಿ ಸೇರಿ ಇಂಧನ ಇಲಾಖೆಗೆ ಸಂಬಂಧಿಸಿ ಏನೇನೋ ಮಾಡಿಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಚರ್ಚೆಗೆ ಬನ್ನಿ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡುತ್ತಿದ್ದಾಗ ಮಧ್ಯಪ್ರವೇಶಿಸಿದ ಬಿಜೆಪಿಯ ಕೆ.ಜಿ.ಬೋಪಯ್ಯ, ಸೋಲಾರ್ ಯೋಜನೆಗೆ ಕೇಂದ್ರದಿಂದ ಎಷ್ಟು ನೆರವು ಬಂದಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಡಿ.ಕೆ.
ಶಿವಕುಮಾರ್, ಏನೂ ಬಂದಿಲ್ಲ. ಬಿಚ್ಚಿಡಬಾರದು ಎಂದು ಸುಮ್ಮನಿದ್ದೇನೆ ಎಂದರು. ಅದಕ್ಕೆ, ಬೋಪಯ್ಯ ಹಾಗೂ ಬಿಜೆಪಿ ಸದಸ್ಯರು, ಏನೇನಿದೆಯೋ ಬಿಚ್ಚಿಡಿ ಎಂದು ಸವಾಲು ಹಾಕಿದಾಗ, ಆಯ್ತು ಬಹಿರಂಗ ಚರ್ಚೆಗೆ ಬನ್ನಿ. ಯಡಿಯೂರಪ್ಪ ಏನೇನೋ ಹೇಳಿದ್ದಾರಲ್ಲಾ? ಎಲ್ಲದರ ಬಗ್ಗೆ ದಾಖಲೆ ಸಮೇತ ಮಾತನಾಡೋಣ ಬನ್ನಿ ಎಂದು ಪ್ರತಿಸವಾಲು ಹಾಕಿದರು.
ಅಷ್ಟರಲ್ಲಿ ಜೆಡಿಎಸ್ನ ಎಚ್.ಡಿ.ರೇವಣ್ಣ ಎದ್ದು ನಿಂತು, “ಆಯ್ತು ನಾನು ಬಹಿರಂಗ ಚರ್ಚೆಗೆ ಸಿದ್ಧ. ನೀವು ಮಂಡಿಸಿರೋ ವರದಿಯಲ್ಲಿ ನನ್ನ ಕಾಲದಲ್ಲಿ ದುಡ್ಡು ತಿಂದಿದ್ದೇನೆ ಎಂದು ಹೇಳಿದ್ದೀರಿ.ಸಾಬೀತು ಮಾಡಿದರೆ ಸದನದಲ್ಲೇ ನೇಣು ಹಾಕಿಕೊಳ್ಳುತ್ತೇನೆ’ ಎಂದರು. ಅದಕ್ಕೆ ಶಿವಕುಮಾರ್, “ಯೇ ರೇವಣ್ಣ, ನೀವು ನಮ್ಮ ಜತೆ ಇರ್ಬೇಕು ಸುಮ್ನಿರಪ್ಪ. ಯಾಕೆ ನೇಣು ಹಾಕಿಕೊಳ್ಳೋ ಮಾತಾಡ್ತಿಯ’ ಎಂದು ಹೇಳಿದರು. ಮಧ್ಯಪ್ರವೇಶಿಸಿದ ಸ್ಪೀಕರ್ ಸ್ಥಾನದಲ್ಲಿದ್ದ ಎನ್.ಎಚ್. ಶಿವಶಂಕರ ರೆಡ್ಡಿ, ಈ ಚರ್ಚೆಗೆ ತೆರೆ ಎಳೆದು
ಮುಖ್ಯಮಂತ್ರಿಗಳಿಗೆ ಮಾತು ಮುಂದುವರಿಸಲು ಅವಕಾಶ ಮಾಡಿಕೊಟ್ಟರು. ಪವರ್ ಮಿನಿಸ್ಟರ್ ಅಲ್ಲವಾ, ಅದಕ್ಕೆ ಅವರು ಪವರ್ಫುಲ್. ಏನೋ ಸಮಜಾಯಿಷಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ