ಡಿಕೆಸು ನಿವಾಸದಲ್ಲಿ ಸಚಿವರಿಗೆ ಡಿಕೆಶಿ ಡಿನ್ನರ್ ಪಾರ್ಟಿ
Team Udayavani, May 23, 2024, 12:06 AM IST
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕ್ಷೇತ್ರ ಭವಿಷ್ಯದ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ಗೆ ಚಿಂತೆ ಶುರುವಾಗಿದ್ದು, ಭೋಜನಕೂಟದ ನೆಪದಲ್ಲಿ ಬುಧವಾರ ರಾತ್ರಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ನಿವಾಸದಲ್ಲಿ ಸೇರಿದ್ದ ಸಿಎಂ ಹಾಗೂ ಸಚಿವರು ಚಿಂತನ-ಮಂಥನ ನಡೆಸಿದರು.
ಚುನಾವಣೆ ಬಳಿಕ ರಾಜ್ಯ ಸರಕಾರ ಉಳಿಯುವುದಿಲ್ಲ, ಗ್ಯಾರಂಟಿಗಳು ಮುಂದುವರಿಯುವುದಿಲ್ಲ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕು, ಇಲ್ಲದಿದ್ದರೆ ಮಂತ್ರಿ ಪದವಿ ಹೋಗುತ್ತದೆ ಎನ್ನುವ ಟಾಸ್ಕ್, ಸಂಪುಟ ಪುನಾರಚನೆ ಆಗಬಹುದು ಎನ್ನುವ ಚರ್ಚೆಗಳು ಮೊದಲಿನಿಂದ ಇದ್ದುದರಿಂದ ಔತಣ ಕೂಟವು ಒಂದು ರೀತಿಯ ಕೈಗೊಂಡ ಕ್ರಮಗಳ ವರದಿ ಕೇಳುವ ಸಭೆಯಂತಿತ್ತು.
ಚುನಾವಣೆ ಮುಗಿಯುತ್ತಿದ್ದಂತೆ ಪಕ್ಷದ ವತಿಯಿಂದ ವರದಿ ಪಡೆದಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಶಿವಕುಮಾರ್, ಭೋಜನ ಕೂಟ ಏರ್ಪಡಿಸಿದಾಗಲೇ ಸೂಕ್ಷ್ಮ ಅರಿತ ಸಚಿವರು ತಮ್ಮ ಕ್ಷೇತ್ರದ ವರದಿ ಹಿಡಿದೇ ಆಗಮಿಸಿದ್ದರು.
ಲೋಕಸಮರದ ಅನಂತರ ಇದೇ ಮೊದಲ ಬಾರಿಗೆ ಒಟ್ಟಿಗೆ ಸೇರಿದ ಮಂತ್ರಿಮಂಡಲದ ಸಹೋದ್ಯೋಗಿಗಳು, ಆರಂಭದಲ್ಲಿ ರಾಜ್ಯ ರಾಜಕಾರಣ, ಕೇಂದ್ರ ಸರಕಾರದ ಭವಿಷ್ಯ, ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ ಸೇರಿ ಹಲವು ವಿಷಯಗಳ ಮೇಲೆ ಚರ್ಚೆ ಹೊರಳಿಸಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಆಗಮಿಸಿದ ಬಳಿಕ ಗಂಭೀರ ಸ್ವರೂಪ ಪಡೆದ ಸಭೆಯಲ್ಲಿ ಲೋಕಸಭೆ ಚುನಾವಣೆ ಮತ್ತು ರಾಜ್ಯದ 28 ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ
ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು
ಅನುಚಿತ ವರ್ತನೆ ; ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ
ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.