ಡಿಕೆಶಿ ಮಾನನಷ್ಟ ಬಗ್ಗೆ ಮಾತಾಡಲ್ಲ: ಯತ್ನಾಳ
Team Udayavani, Aug 6, 2019, 3:00 AM IST
ವಿಜಯಪುರ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ನನ್ನ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಾಗಿ ಈ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, ಪ್ರಕರಣ ನ್ಯಾಯಾಲಯದಲ್ಲಿ ಇರುವ ಹಂತದಲ್ಲಿ ನಾನು ಏನೇ ಮಾತನಾಡಿದರೂ ಮಾಧ್ಯಮಗಳು ತಮಗೆ ತಿಳಿದಂತೆ ವ್ಯಾಖ್ಯಾನ ಮಾಡುತ್ತವೆ. ಹೀಗಾಗಿ ಈ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದರು.