ನಲಪಾಡ್ ಹಲ್ಲೆ ಪ್ರಕರಣ ಡಿಕೆಶಿ ಸಂಧಾನ
Team Udayavani, Mar 18, 2020, 3:03 AM IST
ಬೆಂಗಳೂರು: ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್, ಸಚಿನ್ ಎನ್ನುವವರ ಮೇಲೆ ನಡೆಸಿದ ಹಲ್ಲೆ ಪ್ರಕರಣವನ್ನು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಧಾನ ಮಾಡಿಸುವ ಮೂಲಕ ಅಂತ್ಯಗೊಳಿಸಿದ್ದಾರೆ.
ಭಾನುವಾರ ಸಂಜೆ ನಡೆದ ಗಲಾಟೆಯಲ್ಲಿ ಸಚಿನ್ ಮೇಲೆ ಮೊಹಮದ್ ನಲಪಾಡ್ ಹಲ್ಲೆ ನಡೆಸಿದ್ದಾರೆಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ರಾಜಿ ಸಂಧಾನ ಮಾಡಿಸುವಂತೆ ಶಾಸಕ ಹ್ಯಾರಿಸ್, ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರಿಂದ ಸೋಮವಾರ ರಾತ್ರಿ ನಲಪಾಡ್ ಹಾಗೂ ಸಚಿನ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಂಧಾನ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಚಿನ್ ಬಳಿ ನಲಪಾಡ್ ಕ್ಷಮೆ ಕೋರಿದ್ದಾರೆ. ಅಲ್ಲದೆ ನಲಪಾಡ್ಗೆ ಎಚ್ಚರಿಕೆ ನೀಡಿದ್ದು, ಮುಂದೆ ಈ ರೀತಿಯ ಗಲಾಟೆ ಮಾಡಿಕೊಂಡರೆ ಪಕ್ಷದಿಂದ ಉಚ್ಚಾಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ