“ಮಂತ್ರಿ ಮಾಡದ್ದಕ್ಕೆ ಅತೃಪ್ತಿ ಹೊರ ಹಾಕಬೇಡಿ’
Team Udayavani, Aug 25, 2019, 3:00 AM IST
ಸಿರಿಗೆರೆ: ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಮಾಡಲಿಲ್ಲವೆಂದು ಅತೃಪ್ತಿ ಹೊರ ಹಾಕಿ ಸಭೆ-ಸಮಾರಂಭಗಳಿಂದ ದೂರ ಉಳಿಯುವುದು ಸರಿಯಲ್ಲ ಎಂದು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.
ಸಿರಿಗೆರೆ ಬ್ರಹನ್ಮಠದಲ್ಲಿ ಶನಿವಾರ ನಡೆದ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ರೈತರ ಸಮಾವೇಶದ ನಂತರ ಶಾಂತಿವನದಲ್ಲಿ ಭೋಜನಕ್ಕೆ ತೆರಳಿದ ವೇಳೆ ಬಿಜೆಪಿ ಶಾಸಕರಾದ ಹೊಳಲ್ಕೆರೆಯ ಎಂ.ಚಂದ್ರಪ್ಪ ಹಾಗೂ ಚನ್ನಗಿರಿಯ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಈ ಕಿವಿಮಾತು ಹೇಳಿದ್ದಾರೆ. ಅತೃಪ್ತಿ ಎಂಬುದು ಪ್ರಜಾಪ್ರಭುತ್ವ ಪಾಲನೆಯ ಲಕ್ಷಣವಲ್ಲ.
ಶಾಸಕರಾಗಿ ತಮ್ಮ ಕ್ಷೇತ್ರದಲ್ಲಿನ ಜವಾಬ್ದಾರಿಯುತ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ರಾಜಕೀಯ ಧುರೀಣರಾದ ನಿಮ್ಮ ಹೊಣೆಗಾರಿಕೆ. ಮಂತ್ರಿಗಿರಿ ಪಡೆದುಕೊಳ್ಳುವುದಕ್ಕಿಂತ ಕ್ಷೇತ್ರಗಳ ಅಭಿವೃದ್ಧಿಗೆ ಏನಾಗಬೇಕೆಂಬುದರ ಕಡೆಗೆ ಗಮನ ಹರಿಸುವುದು ಒಳ್ಳೆಯದು ಎಂದರು. ನಿಮ್ಮ ನಾಯಕರನ್ನು ಭೇಟಿ ಮಾಡಿ, ನಮ್ಮನ್ನು ಮಂತ್ರಿಗಳನ್ನಾಗಿ ಮಾಡೋದು, ಬಿಡೋದು ನಿಮಗೆ ಬಿಟ್ಟಿದ್ದು. ನಾವು ನಮ್ಮ ಕ್ಷೇತ್ರದ ಕೆಲಸಗಳತ್ತ ಗಮನ ಹರಿಸುತ್ತೇವೆ ಎಂದು ತಿಳಿಸಬೇಕು ಎಂದು ಸ್ವಾಮೀಜಿಯವರು ಸ್ಥಳದಲ್ಲಿದ್ದ ಶಾಸಕರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ